Webdunia - Bharat's app for daily news and videos

Install App

ಬಾಡಿಗೆಗೆ ಬಂದವರು ಶವವಾಗಿ ಪತ್ತೆ ! ಈ ಕುಟುಂಬದ ಸಾವಿಗೆ ಕಾರಣವಾದ್ರು ಏನು?

Webdunia
ಸೋಮವಾರ, 28 ಆಗಸ್ಟ್ 2023 (09:01 IST)
ಮೈಸೂರು : ಗಂಡ – ಹೆಂಡತಿ, ಇಬ್ಬರು ಮಕ್ಕಳ ಕುಟುಂಬವದು. ಎರಡು ತಿಂಗಳ ಹಿಂದೆಯಷ್ಟೇ ಬಾಡಿಗೆಗೆ ಬಂದಿದ್ದರು. ಹೀಗೆ ಬಾಡಿಗೆಗೆ ಬಂದವರು ಯಾರು ಎಂಬುದು ಅಕ್ಕ ಪಕ್ಕದ ಮನೆಯವರಿಗೆ ಗೊತ್ತಿರಲಿಲ್ಲ. ಅಷ್ಟರಲ್ಲೇ ಅವರೆಲ್ಲ ಒಟ್ಟಿಗೆ ಶವವಾಗಿದ್ದಾರೆ. ಮೈಸೂರಿನಲ್ಲಿ ಇಂತಹ ದಾರುಣ ಘಟನೆ ನಡೆದಿದೆ.

ಚಾಮುಂಡಿಪುರಂ ಬಡಾವಣೆಯಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ. ಕುಟುಂಬದ ಮಹದೇವಸ್ವಾಮಿ (48), ಅನಿತಾ (35), ಮಕ್ಕಳಾದ ಚಂದ್ರಕಲಾ (17), ಧನಲಕ್ಷ್ಮಿ (15) ಮನೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ. 

ಮಹದೇವಸ್ವಾಮಿ ಮೂಲತಃ ಮೈಸೂರು ತಾಲೂಕಿನ ಬರಡನಪುರ ಗ್ರಾಮದವರು. ಮೈಸೂರಿನ ಬಂಡಿಪಾಳ್ಯದಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಅವರದ್ದೇ ಸ್ವಂತ ಅಂಗಡಿ ಇತ್ತು. ಮೈಸೂರಿನ ಚಾಮುಂಡಿಪುರಂಗೆ ಎರಡು ತಿಂಗಳ ಹಿಂದೆ ಬಂದಿದ್ದರು. ಇದೀಗ ನಾಲ್ವರ ಶವ ಮನೆಯ ಒಳಗೆ ಪತ್ತೆಯಾಗಿದೆ.

ಮಗಳು ಚಂದ್ರಕಲಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ ಉಳಿದವರ ಶವಗಳು ಕೆಳಗೆ ಬಿದ್ದಿವೆ. ಇವರೆಲ್ಲಾ ಎರಡು ದಿನದ ಹಿಂದೆಯೇ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಂದು ಶವಗಳ ಕೊಳೆತ ವಾಸನೆಯಿಂದ ಅನುಮಾನಗೊಂಡ ಅಕ್ಕಪಕ್ಕದವರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments