Webdunia - Bharat's app for daily news and videos

Install App

ಬಾಡಿಗೆಗೆ ಬಂದವರು ಶವವಾಗಿ ಪತ್ತೆ ! ಈ ಕುಟುಂಬದ ಸಾವಿಗೆ ಕಾರಣವಾದ್ರು ಏನು?

Webdunia
ಸೋಮವಾರ, 28 ಆಗಸ್ಟ್ 2023 (09:01 IST)
ಮೈಸೂರು : ಗಂಡ – ಹೆಂಡತಿ, ಇಬ್ಬರು ಮಕ್ಕಳ ಕುಟುಂಬವದು. ಎರಡು ತಿಂಗಳ ಹಿಂದೆಯಷ್ಟೇ ಬಾಡಿಗೆಗೆ ಬಂದಿದ್ದರು. ಹೀಗೆ ಬಾಡಿಗೆಗೆ ಬಂದವರು ಯಾರು ಎಂಬುದು ಅಕ್ಕ ಪಕ್ಕದ ಮನೆಯವರಿಗೆ ಗೊತ್ತಿರಲಿಲ್ಲ. ಅಷ್ಟರಲ್ಲೇ ಅವರೆಲ್ಲ ಒಟ್ಟಿಗೆ ಶವವಾಗಿದ್ದಾರೆ. ಮೈಸೂರಿನಲ್ಲಿ ಇಂತಹ ದಾರುಣ ಘಟನೆ ನಡೆದಿದೆ.

ಚಾಮುಂಡಿಪುರಂ ಬಡಾವಣೆಯಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ. ಕುಟುಂಬದ ಮಹದೇವಸ್ವಾಮಿ (48), ಅನಿತಾ (35), ಮಕ್ಕಳಾದ ಚಂದ್ರಕಲಾ (17), ಧನಲಕ್ಷ್ಮಿ (15) ಮನೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ. 

ಮಹದೇವಸ್ವಾಮಿ ಮೂಲತಃ ಮೈಸೂರು ತಾಲೂಕಿನ ಬರಡನಪುರ ಗ್ರಾಮದವರು. ಮೈಸೂರಿನ ಬಂಡಿಪಾಳ್ಯದಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಅವರದ್ದೇ ಸ್ವಂತ ಅಂಗಡಿ ಇತ್ತು. ಮೈಸೂರಿನ ಚಾಮುಂಡಿಪುರಂಗೆ ಎರಡು ತಿಂಗಳ ಹಿಂದೆ ಬಂದಿದ್ದರು. ಇದೀಗ ನಾಲ್ವರ ಶವ ಮನೆಯ ಒಳಗೆ ಪತ್ತೆಯಾಗಿದೆ.

ಮಗಳು ಚಂದ್ರಕಲಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ ಉಳಿದವರ ಶವಗಳು ಕೆಳಗೆ ಬಿದ್ದಿವೆ. ಇವರೆಲ್ಲಾ ಎರಡು ದಿನದ ಹಿಂದೆಯೇ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಂದು ಶವಗಳ ಕೊಳೆತ ವಾಸನೆಯಿಂದ ಅನುಮಾನಗೊಂಡ ಅಕ್ಕಪಕ್ಕದವರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments