Webdunia - Bharat's app for daily news and videos

Install App

ಆಷಾಢ ಮಾಸಕ್ಕೆ ಚಾಮುಂಡಿ ದೇವಿಯ ದರ್ಶನಕ್ಕೆ ಬರುವವರು ಇದನ್ನು ತಿಳಿದುಕೊಳ್ಳಿ

Sampriya
ಮಂಗಳವಾರ, 9 ಜುಲೈ 2024 (20:02 IST)
Photo Courtesy X
ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದಲ್ಲಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು  ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಹೇಳಿದ್ದಾರೆ.

ಈ ಬಗ್ಗೆ ಇಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಆಷಾಢ ಮಾಸದಲ್ಲಿ ಚಾಮುಂಡಿಬೆಟ್ಟಕ್ಕೆ  ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿದೆ.

ಜುಲೈ 12, 19, 26 ಹಾಗೂ ವರ್ದಂತಿಯು 27 ರಂದು ಮತ್ತು ಆಗಸ್ಟ್ 2ರಂದು ಕಡೆಯ ಆಷಾಢ ಶುಕ್ರವಾರ ಆಗಲಿದೆ. ಈ ಐದು ದಿನಗಳಲ್ಲಿ ದೇವಾಲಯದ ವತಿಯಿಂದ ಕೆಎಸ್ಆರ್ ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಚಾಮುಂಡಿಬೆಟ್ಟಕ್ಕೆ ಪ್ರಯಾಣಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ ಎಂದರು.

ಇನ್ನೂ ಸಾರ್ವಜನಿಕರು ವಾಹನವನ್ನು ಲಲಿತಾ ಮಹಲ್ ಪಾರ್ಕ್ ಮಾಡಬೇಕೆಂದರು.  ಇನ್ನು ಈ ವೇಳೆ ದೇವಿಯ ದರ್ಶನಕ್ಕೆ ಯಾವುದೇ ಪಾಸ್‌ ವ್ಯವಸ್ಥೆಯನ್ನು ಮಾಡುವುದಿಲ್ಲ. ಸಾರ್ವಜನಿಕರು ತಮ್ಮ  ಅನುಕೂಲಕ್ಕಾಗಿ ವಿಶೇಷವಾಗಿ ವ್ಯವಸ್ಥೆಯನ್ನು ಮಾಡಲಾಗಿರುವ 50 ಹಾಗೂ 300 ರೂಪಾಯಿ ಪ್ರವೇಶ ಮತ್ತು ಸರ್ವದರ್ಶನದ ಮೂಲಕ ದೇವಾಲಯಕ್ಕೆ ಪ್ರವೇಶವನ್ನು ಪಡೆಯಬಹುದು ಎಂದು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments