Webdunia - Bharat's app for daily news and videos

Install App

ಸಂವಿಧಾನಕ್ಕೆ ಅಪಾಯ ಒಡ್ಡುವವರನ್ನು ಸಹಿಸಬಾರದು – ಸಿಎಂ

geetha
ಶನಿವಾರ, 24 ಫೆಬ್ರವರಿ 2024 (20:04 IST)
ಬೆಂಗಳೂರು : ಜಗತ್ತಿನ ಅನೇಕ ದೇಶಗಳ ಸಂವಿಧಾನವನ್ನು ಓದಿ ಅದರಲ್ಲಿರುವ ಒಳ್ಳೆಯ ಅಂಶಗಳನ್ನು ಪರಿಗಣಿಸಿ ನಮ್ಮ ಸಂವಿಧಾನವನ್ನು ರಚಿಸಲಾಗಿದೆ.  ನಮ್ಮ ದೇಶದ ಜನರ ರಾಜಕೀಯ, ಆರ್ಥಿಕ, ಸಾಮಾಜಿಕ ಅಭಿವೃದ್ಧಿಗಳನ್ನು ಗಮನದಲ್ಲಿರಿಸಿಕೊಂಡು ಸಂವಿಧಾನವನ್ನು ಡಾ. ಬಿ.ಆರ್‌ .ಅಂಬೇಡ್ಕರ್‌ ರಚಿಸಿದರು ಎಂದು ಸಿಎಂ ಹೇಳಿದರು. 
 
 ಈ ದೇಶದಲ್ಲಿ ಎರಡು ಅಪಪ್ರಚಾರ ನಡೆಯುತ್ತಿದೆ. ಕೇವಲ ದಲಿತರ ಉದ್ದಾರಕ್ಕಾಗಿ ಸಂವಿಧಾನ ರಚನೆಯಾಗಿದೆ. ಹಾಗೂ ನಮ್ಮ ಪರಂಪರೆಗೆ ಸಂವಿಧಾನ ಅನುಗುಣವಾಗಿಲ್ಲ ಎಂಬುದು ಎರಡು ಮುಖ್ಯ ಆರೋಪಗಳಾಗಿವೆ ಎಂದು ನುಡಿದ ಸಿಎಂ ಸಿದ್ದರಾಮಯ್ಯ,  ಜಾತಿಯ ಕಾರಣದಿಂದ ಉಂಟಾಗಿರುವ ಸಮಾಜದಲ್ಲಿ ರಾಜಕೀಯ ಅಸಮಾನತೆ, ಸಾಮಾಜಿಕ ಅಸಮಾನತೆ, ಆರ್ಥಿಕ ಅಸಮಾನತೆ ಉಂಟಾಗಿದೆ. ಈ ಅಸಮಾನತೆಯನ್ನು ಹೋಗಲಾಡಿಸಲು ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಸಂವಿಧಾನದಿಂದ ಮಾತ್ರ ಸಾಧ್ಯ ಎಂದರು. 

ಸಂವಿಧಾನಕ್ಕೆ ಅಪಾಯ ಒದಗುವುದನ್ನು ನಾವು ಯಾರೂ ಸಹಿಸಿಕೊಳ್ಳಬಾರದು. ಸಂವಿಧಾನ ಉಳಿದರೆ ನಾವೆಲ್ಲರೂ ಉಳಿಯುತ್ತೇವೆ. ಆದರೆ ಸಂವಿಧಾನಕ್ಕೆ ಧಕ್ಕೆ ಒದಗಿದರೆ ನಾವು ನಾಶವಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶನಿವಾರ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾನತೆ, ಸ್ವಾತಂತ್ರ್ಯ. ಭ್ರಾತೃತ್ವ ಮೂರು ಸಂವಿಧಾನದ ಮುಖ್ಯ ಅಂಶಗಳಾಗಿವೆ. ಇದನ್ನು ಒಪ್ಪದವರು ಸಂವಿಧಾನದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದರು.

ಸಾಮಾಜಿಕ ಪ್ರಜಾಪ್ರಭುತ್ವವು ರಾಜಕೀಯ ಮತ್ತು ಸಮಾನತೆಯ ತಳಹದಿಯ ಮೇಲೆ ನಿಂತಾಗ ಮಾತ್ರ ಸಂವಿಧಾನದ ಆಶಯ ಸಾರ್ಥಕವಾಗುತ್ತದೆ. ಸಂವಿಧಾನ ಜಾರಿಯಾಗಿ 75 ವರ್ಷ ಕಳೆದರೂ ಇನ್ನೂ ಅಸಮಾನತೆ ಹೋಗಿಲ್ಲ. ಈ ರಾಜಕೀಯ, ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸುವುದೇ ಪ್ರತಿಯೊಂದು ಸರ್ಕಾರದ ಜವಾಬ್ದಾರಿ. ಎಂದು ನುಡಿದ ಸಿಎಂ ಸಂವಿಧಾನ ಯಶಸ್ವಿಯಾಗಬೇಕಾದರೆ , ಸಂವಿಧಾನದ ಆಶಯಗಳು ಯಾರ ಕೈಲಿ ಜಾರಿಯಾಗಬೇಕಿದೆ ಎಂಬುದು ಮುಖ್ಯ. ಯಾರು ಸಂವಿಧಾನದ ಮೇಲೆ ನಂಬಿಕೆಯಿಟ್ಟಿದ್ದಾರೋ ಅವರ ಕೈಗೆ ಅಧಿಕಾರ ಸಿಕ್ಕಿದರೆ ಮಾತ್ರ ಸಂವಿಧಾನದ ರಕ್ಷಣೆ ಸಾಧ್ಯ ಎಂದರು. 
ಸಚಿವ ಮಹದೇವಪ್ಪ, ಸಚಿವ ಪ್ರಿಯಾಂಕ್‌ ಖರ್ಗೆ, ಶಾಸಕ ಎಸ್‌ ಟಿ ಸೋಮಶೇಖರ್‌, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶ ಗೋಪಾಲಗೌಡ, ನಿವೃತ್ತ ಹಿರಿಯ ನ್ಯಾಯಾಧೀಶ ನಾಗಮೋಹನ್‌ ದಾಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments