Webdunia - Bharat's app for daily news and videos

Install App

ಮೂರು ಡಿಸಿಎಂ ಹುದ್ದೆ ಬೇಕೆನ್ನುವವರು ಹೈಕಮಾಂಡ್‌ ಜತೆ ಚರ್ಚಿಸಲಿ: ಡಿಕೆಶಿ

Sampriya
ಗುರುವಾರ, 27 ಜೂನ್ 2024 (17:15 IST)
Photo Courtesy X

ಬೆಂಗಳೂರು: ಇನ್ನೂ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ರಚಿಸಬೇಕು ಎನ್ನುವವರು ಹೈಕಮಾಂಡ್ ಬಳಿ ಮಾತನಾಡಲಿ. ಮಾಧ್ಯಮಗಳ ಮುಂದೆ ಚರ್ಚಿಸುವುದರಿಂದ ಯಾವುದೇ "ಪರಿಹಾರ" ಸಿಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗುರುವಾರ ತಿರುಗೇಟು ನೀಡಿದ್ದಾರೆ.

ವೀರಶೈವ-ಲಿಂಗಾಯತ, ಎಸ್‌ಸಿ/ಎಸ್‌ಟಿ ಮತ್ತು ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಲವು ಸಚಿವರು ಪಟ್ಟು ಹಿಡಿದಿದ್ದಾರೆ. ಸದ್ಯ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಒಕ್ಕಲಿಗ ಸಮುದಾಯದ ಶಿವಕುಮಾರ್ ಮಾತ್ರ ಉಪಮುಖ್ಯಮಂತ್ರಿಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಮಾಧ್ಯಮಗಳ ಮುಂದೆ ಮಾತನಾಡುವವರು ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ, ಏನು ಬೇಕಾದರೂ ಪರಿಹಾರ ಪಡೆದುಕೊಂಡು ಬರಲಿ. ಮಾಧ್ಯಮದ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಮಾಧ್ಯಮದವರು ಪರಿಹಾರ ಕೊಡುವುದಿಲ್ಲ. ಮಾಧ್ಯಮದವರು ಪ್ರಚಾರ ಕೊಡುತ್ತಾರೆ ಅಷ್ಟೇ. ಏನೇ ಇದ್ದರೂ ಹೈಕಮಾಂಡ್ ಮುಂದೆ ಹೋಗಿ ಮಾತನಾಡಿ ಪರಿಹಾರ ತೆಗೆದುಕೊಂಡು ಬರಲಿ" ಎಂದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ, ಡಿಸಿಎಂ, ಬಹಳ ಸಂತೋಷ, ಟೈಮ್ ವೇಸ್ಟ್ ಮಾಡಬಾರದು. ಏನೇನು ಬೇಕು ಹೈಕಮಾಂಡ್ ಮುಂದೆ ಹೋಗಿ ಪರಿಹಾರ ಪಡೆಯಲಿ. ಎಲ್ಲೆಲ್ಲಿ ಬೇಕೋ ಅಲ್ಲಲ್ಲಿ ಹೋಗಿ ಪರಿಹಾರ ಪಡೆಯಲಿ. ಡಾಕ್ಟರ್ ಬಳಿ ಹೋದರೆ ಔಷಧಿ ಕೊಡುತ್ತಾರೆ. ಲಾಯರ್ ಬಳಿ ಹೋದರೆ ನ್ಯಾಯ, ಪರಿಹಾರ ಕೊಡುತ್ತಾರೆ. ಎಲ್ಲೆಲ್ಲಿ ಹೋಗಬೇಕು ಅಲ್ಲಿಗೆ ಹುಡುಕಿಕೊಂಡು ಹೋಗಲಿ. ಯಾರು ಬೇಕಾದರು ಹೋಗಲಿ. ನನ್ನದೇನು ಅಭ್ಯಂತರ ಇಲ್ಲ" ಎಂದರು.

ಡಿಸಿಎಂ ಬೇಡಿಕೆ ವಿಚಾರದಲ್ಲಿ ಮುಂಚೂಣಿಯಲ್ಲಿರುವ ಸಚಿವ ಕೆ.ಎನ್.ರಾಜಣ್ಣ ಅವರೊಂದಿಗೆ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದ್ದು, ಇನ್ನು ಮುಂದೆ ಈ ಕುರಿತು ಬಹಿರಂಗ ಹೇಳಿಕೆ ನೀಡದಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಾರ್ವಜನಿಕ ಹೇಳಿಕೆಗಳಿಂದ ಸರ್ಕಾರ ಮತ್ತು ಪಕ್ಷದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments