Webdunia - Bharat's app for daily news and videos

Install App

ವಿವಾದಿತ ಜಮೀನಿಗಾಗಿ ನಡುರಸ್ತೆಯಲ್ಲೇ ಬಡಿದಾಡಿಕೊಂಡರು..!

Webdunia
ಭಾನುವಾರ, 16 ಡಿಸೆಂಬರ್ 2018 (18:19 IST)
ಜಮೀನು ವಿವಾದ ಕಾರಣದಿಂದಾಗಿ ನಡುಬೀದಿಯಲ್ಲೇ ಎರಡು ಗುಂಪುಗಳ ಜನರು ಬಡಿದಾಡಿಕೊಂಡ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆ‌‌ ಮದ್ದೂರು ತಾಲೂಕಿನ ಹಳ್ಳಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಹಳ್ಳಿಕೆರೆ ಹಾಗೂ ತೊಪ್ಪನಹಳ್ಳಿ ಗ್ರಾಮದ ಎರಡು ಗುಂಪುಗಳ‌ ನಡುವೆ ಮಾರಾಮಾರಿ ನಡೆದಿದೆ.
ಘಟನೆಯಲ್ಲಿ 3 ಮಹಿಳೆಯರು ಸೇರಿದಂತೆ 5 ಜನರಿಗೆ ಗಾಯಗಳಾಗಿವೆ. ಹಳ್ಳಿಕೆರೆಯ ತಗಡಯ್ಯ ಎಂಬುವರಿಗೆ ಗಂಭೀರ ಗಾಯವಾಗಿದೆ.

ಹಳ್ಳಿಕೆರೆ ಗ್ರಾಮದ ಪದ್ಮ, ನಾಗಮಣಿ, ಪುಟ್ಟಸ್ವಾಮಿ, ಪವಿತ್ರ, ಸೋಮಶೇಖರ್ ಹಾಗೂ ತೊಪ್ಪನಹಳ್ಳಿ ಗ್ರಾಮದ ಚನ್ನೇಗೌಡ, ಮುತ್ತುರಾಜು, ಮಧು, ಗಾಯಗೊಂಡವರಾಗಿದ್ದಾರೆ.

ಹಳ್ಳಿಕೆರೆ ಗ್ರಾಮದ ಸರ್ವೆ ನಂ. 237ರ ಮೂರು ಎಕರೆ ಜಮೀನನ್ನ ಮಹೇಂದ್ರ ಎಂಬುವರು ಖರೀದಿ‌ ಮಾಡಿದರು. ಬಳಿಕ ಆ ಜಮೀನು ಪಕ್ಕವಿರುವ ಸರ್ವೆ ನಂ.92ರ ಪದ್ಮ ಎಂಬುವರ ಜಮೀನನ್ನು ಮಹೇಂದ್ರ ಒತ್ತುವರಿ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.

ಈ ವಿಚಾರವಾಗಿ ಮಹೇಂದ್ರ ಬೆಂಬಲಿಗರು ಹಾಗೂ ಪದ್ಮ ಕುಟುಂಬಸ್ಥರ ನಡುವೆ ಮಾರಾಮಾರಿ ನಡೆದಿದೆ.  ಮದ್ದೂರು ಪೋಲಿಸ್ ಠಾಣೆಯಲ್ಲಿ ಎರಡು ಗುಂಪುಗಳಿಂದ ದೂರು ಪ್ರತಿದೂರು ದಾಖಲಾಗಿವೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments