Webdunia - Bharat's app for daily news and videos

Install App

ಕೆಪಿಟಿಸಿಎಲ್ ಆಕ್ರಮದಲ್ಲಿ ಮೂವರ ಸೆರೆ

Webdunia
ಗುರುವಾರ, 25 ಆಗಸ್ಟ್ 2022 (16:32 IST)
ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಕ್ಕೆ ಮೂವರನ್ನೂ ಬಂಧಿಸಲಾಗಿದೆ.
 
ಹುಕ್ಕೇರಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾದ ಕಮತನೂರ ನಿವಾಸಿ ಆದೇಶ ಈರಪ್ಪ ನಾಗನೂರಿ (26), ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಮಡಿವಾಳಪ್ಪ ಬಾಳಪ್ಪ ತೋರಣಗಟ್ಟಿ (36), ಇದೇ ತಾಲೂಕಿನ ಹೊಸಕೋಟಿಯ ಶಂಕರ ಕಲ್ಲಪ್ಪ ಉಣಕಲ್‌ (30) ಬಂಧಿತರು.
 
ಇವರೊಂದಿಗೆ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಅಭ್ಯರ್ಥಿಗಳೇ ಮಾಹಿತಿ ನೀಡಿದ ಈ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.
 
ಬಂಧಿತರಲ್ಲಿ ಆದೇಶ ಎಂಬುವವರು ಹುಕ್ಕೇರಿ ತಾಲ್ಲೂಕಿನ ಶಿರಹಟ್ಟಿ (ಬಿ.ಕೆ) ಗ್ರಾಮದ ತೋಟದ ಮನೆಯಲ್ಲಿ ಕುಳಿತು ಪ್ರಶ್ನೆಪತ್ರಿಕೆಯ ಉತ್ತರಗಳನ್ನು ಹೇಳಿದರು. ಬಾಳಪ್ಪ ಹಾಗೂ
ಶಂಕರ ಇಬ್ಬರೂ ಅಭ್ಯರ್ಥಿಗಳ ಫಲಿತಾಂಶ. ತಮ್ಮತಮ್ಮ ಅಭ್ಯರ್ಥಿಗಳಿಗೆ ಬ್ಲೂಟೂತ್ ಉಪಕರಣಗಳನ್ನು ಖರೀದಿಸಿದ್ದರು. ಈ ಇಬ್ಬರು ಅಭ್ಯರ್ಥಿಗಳಿಗೆ ಉಪಕರಣ ಖರೀದಿಸಿದ್ದರೋ ಅವರು ಸರಿಯಾದ ಸಮಯಕ್ಕೆ ಬಾರದ ಕಾರಣ ಪರೀಕ್ಷೆಗೆ ಹಾಜರಾಗಲಿಲ್ಲ. ಆದರೆ, ಅವರಿಗೆ ನೀಡುವಂತೆ ಬ್ಲೂಟೂತ್ ಉಪಕರಣಗಳಲ್ಲಿ ಪರೀಕ್ಷಾ ಕೇಂದ್ರದ ಹೊರಗಿದ್ದ ಸಿಬ್ಬಂದಿಯೊಬ್ಬರ ಕೈಗೆ ಕೊಟ್ಟು ಬಂದಿದ್ದರು ಎಂದು ವಿಚಾರಣೆ ವೇಳೆ ಗೊತ್ತಾಗಿದೆ.
 
ಹಲವು ವರ್ಷಗಳಿಂದ ಅಕ್ರಮದಲ್ಲಿ ಇನ್ನೂ ಎರಡು ತಂಡಗಳು ಬೆಳಗಾವಿಯಲ್ಲಿ ಒಂದು ತಂಡ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕ್ರಿಯಾಶೀಲವಾಗಿರುವ ಸುಳಿವು ಸಿಕ್ಕಿದೆ. ಇನ್ನೆರಡು ದಿನಗಳಲ್ಲಿ ಬೆಳಗಾವಿ ತಂಡದ ಆರೋಪಿಗಳನ್ನು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments