ಮೆಟ್ರೋ ನಿಲ್ದಾಣಗಳಲ್ಲಿ ಮೂರು ಭಾಷೆಗಳನ್ನು ಬಳಸಲು ಸಾಧ್ಯವಿಲ್ಲ

Webdunia
ಮಂಗಳವಾರ, 31 ಅಕ್ಟೋಬರ್ 2023 (20:05 IST)
ಮೆಟ್ರೋ ರೈಲ್ವೆ ನಿಲ್ದಾಣಗಳಲ್ಲಿ ಮೂರು ಭಾಷೆಗಳನ್ನು ಬಳಸಲು ಸಾಧ್ಯವಿಲ್ಲ ಎಂದು ಈಗಾಗಲೇ ಕೇಂದ್ರ ಸರಕಾರಕ್ಕೆ ಸ್ಪಷ್ಟವಾಗಿ ಪತ್ರ ಬರೆದಿದ್ದೇನೆ.. ಪ್ರತ್ಯೇಕ ನಾಡಧ್ವಜವಿರಬೇಕು ಎನ್ನುವುದು ಪ್ರತಿಯೊಬ್ಬ ಕನ್ನಡಿಗನ ಕನಸಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತ್ಯೇಕ ನಾಡಧ್ವಜವಿರಬೇಕು ಎನ್ನುವುದು ಆರು ಕೋಟಿ ಕನ್ನಡಿಗರ ಬಯಕೆಯಾಗಿದೆ. ಕಳೆದ 1966 ರಿಂದ ಕರ್ನಾಟಕ ನಾಡಧ್ವಜವನ್ನು ಹೊಂದಿದೆ. ಸಂವಿಧಾವ ಕೂಡಾ ಯಾವುದೇ ರಾಜ್ಯ ತನ್ನದೇ ಆದ ಧ್ವಜವನ್ನು ಹೊಂದುವುದನ್ನು ನಿಷೇಧಿಸಿಲ್ಲ. ಆದ್ದರಿಂದ, ನಮ್ಮದೇ ಆದ ಪ್ರತ್ಯೇಕ ಧ್ವಜ ಹೊಂದಬೇಕು ಎಂದರು.
 
ತಮಿಳುನಾಡು ಮತ್ತು ಕೇರಳ ರಾಜ್ಯಗಳು ಎರಡು ಭಾಷಾ ನೀತಿಯನ್ನು ಪಾಲಿಸುತ್ತಿವೆ. ಕರ್ನಾಟಕಕ್ಕೆ ಮೂರು ಭಾಷಾ ನೀತಿ ಏಕೆ ಹೇರಬೇಕು? ನಾವು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
 
ಕನ್ನಡ ಭಾಷೆಗಾಗಿ ಹೋರಾಟ ಮಾಡಿದ ಕಾರ್ಯಕರ್ತರ ವಿರುದ್ಧದ ಕೇಸ್‌ಗಳನ್ನು ಸರಕಾರ ವಾಪಸ್ ಪಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ರಕ್ಷಣಾ ವೇದಿಕೆಯ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ನನ್ನನ್ನು ಖುಷಿಯಾಗಿಡಬೇಕು, ಅದು ಅವರಿಗೂ ಒಳ್ಳೆಯದು: ಡೊನಾಲ್ಡ್ ಟ್ರಂಪ್ ಹೊಸ ಬೆದರಿಕೆ

ಅಬ್ಬಾ ಎಂಥಾ ಧೈರ್ಯ ಈ ನಾಯಿಗೆ: ಗೆಳೆಯನಿಗಾಗಿ ಏನು ಮಾಡ್ತು ನೋಡಿ Video

Karnataka Weather: ಈ ವಾರದ ಹವಾಮಾನದಲ್ಲಿ ಭಾರೀ ಬದಲಾವಣೆ, ಈ ಎಚ್ಚರಿಕೆ ಗಮನಿಸಿ

ತ್ರಿಪುರಾ: ವಿವಿಧೆಡೆ ₹100 ಕೋಟಿ ಮೌಲ್ಯದ ಗಾಂಜಾ ಗಿಡಗಳು ನಾಶ

ಬಳ್ಳಾರಿ ಘರ್ಷಣೆ, ಬಿಗ್‌ ಅಪ್ಡೇಟ್ ಕೊಟ್ಟ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments