ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟದ ಮೇಲಿದೆ ಮೂವರ ಕಣ್ಣು: ವಿಜಯೇಂದ್ರ ಅವಧಿ ಸದ್ಯದಲ್ಲೇ ಮುಕ್ತಾಯ

Krishnaveni K
ಬುಧವಾರ, 1 ಜನವರಿ 2025 (10:55 IST)
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅಧಿಕಾರಾವಧಿ ಸದ್ಯದಲ್ಲೇ ಮುಗಿಯಲಿದ್ದು ಮೂವರು ಪಟ್ಟದ ಮೇಲೆ ಕಣ್ಣಿಟ್ಟಿದ್ದಾರೆ. ಮುಂದಿನ ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಕುತೂಹಲವಿದೆ.

ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಅವಧಿ ವಿಸ್ತರಿಸಲು ಬಯಸುತ್ತಿದ್ದಾರೆ. ಆದರೆ ಅವರ ಮೇಲೆ ಕೆಲವು ನಾಯಕರು ಈಗಾಗಲೇ ಬಂಡಾಯವೆದ್ದಿದ್ದಾರೆ. ಹೀಗಾಗಿ ಮತ್ತೆ ಅವರನ್ನೇ ಮುಂದುವರಿಸಿದರೆ ಈ ನಾಯಕರ ಆಕ್ರೋಶ ಹೆಚ್ಚಾಗುವುದು ಖಚಿತ. ಈ ಹಿನ್ನಲೆಯಲ್ಲಿ ವಿಜಯೇಂದ್ರ ವಿಚಾರದಲ್ಲಿ ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆಯಿಡಬೇಕಾಗುತ್ತದೆ.ಆದರೆ ಅಷ್ಟು ಸುಲಭವಾಗಿ ರಾಜ್ಯ ಬಿಜೆಪಿ ಚುಕ್ಕಾಣಿ ತಮ್ಮ ಕೈ ತಪ್ಪಿ ಹೋಗಲು ಬಿಎಸ್ ಯಡಿಯೂರಪ್ಪ ಬಿಡಲ್ಲ ಎನ್ನುವುದೂ ಅಷ್ಟೇ ಸತ್ಯ.

ಬಸವರಾಜ ಬೊಮ್ಮಾಯಿಗೆ ಪಟ್ಟ
ಒಂದು ವೇಳೆ ವಿಜಯೇಂದ್ರಗೆ ಎರಡನೇ ಅವಧಿಗೆ ಅಧ್ಯಕ್ಷ ಪಟ್ಟ ವಿಸ್ತರಣೆ ಮಾಡಲು ಹೈಕಮಾಂಡ್ ಒಪ್ಪದೇ ಇದ್ದರೆ ಬಸವರಾಜ ಬೊಮ್ಮಾಯಿಯವರನ್ನು ಆ ಪಟ್ಟಕ್ಕೇರಿಸಲು ಯಡಿಯೂರಪ್ಪ ಹೈಕಮಾಂಡ್ ಮನ ಒಲಿಸಲಿದ್ದಾರೆ. ಬೊಮ್ಮಾಯಿ ತಮ್ಮ ಆಪ್ತರಾಗಿದ್ದು ಅವರು ಅಧ್ಯಕ್ಷರಾದರೂ ಬಿಜೆಪಿ ಮೇಲೆ ಹಿಡಿತ ಸಾಧಿಸಬಹುದು ಎಂಬುದು ಅವರ ಲೆಕ್ಕಾಚಾರವಾಗಿದೆ. ಈ ಕಾರಣಕ್ಕೆ ಈಗಾಗಲೇ ಗುಪ್ತವಾಗಿ ಬೊಮ್ಮಾಯಿ ಜೊತೆ ಅವರು ಮಾತುಕತೆಯನ್ನೂ ನಡೆಸಿದ್ದಾರೆ ಎಂಬ ಗುಸು ಗುಸು ಕೇಳಿಬರುತ್ತಿದೆ.

ಶೋಭಾ ಕರಂದ್ಲಾಜೆ
ಒಂದು ವೇಳೆ ಬೊಮ್ಮಾಯಿ ಬೇಡ ಎಂದಾದರೆ ಶೋಭಾ ಕರಂದ್ಲಾಜೆಗೆ ಅಧ್ಯಕ್ಷಗಿರಿ ಕೊಡಲು ಯಡಿಯೂರಪ್ಪ ಡಿಮ್ಯಾಂಡ್ ಮಾಡಬಹುದು. ಶೋಭಾಗೆ ಎಲ್ಲಾನಾಯಕರ ಜೊತೆ ಉತ್ತಮ ಸಂಬಂಧವಿದೆ. ಹೀಗಾಗಿ ಅವರನ್ನು ಆಯ್ಕೆ ಮಾಡಿದರೆ ಯಾರೂ ವಿರೋಧಿಸಲ್ಲ ಎಂಬ ಲೆಕ್ಕಾಚಾರವೂ ಇದೆ. ಜೊತೆಗೆ ಅವರಿಗೆ ತಟಸ್ಥ ನಾಯಕರ ಬೆಂಬಲವೂ ಇದೆ. ಒಟ್ಟಿನಲ್ಲಿ ಸದ್ಯದಲ್ಲೇ ಹೊಸ ನಾಯಕನ ಆಯ್ಕೆ ಬಗ್ಗೆ ಅಧಿಕೃತ ತೀರ್ಮಾನ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments