Webdunia - Bharat's app for daily news and videos

Install App

ಕೆರೆಯಲ್ಲಿ ಸಿಲುಕಿದ್ದ ತಂಗಿಯನ್ನು ರಕ್ಷಿಸಲು ಧಾವಿಸಿದ ಅಕ್ಕ ಸೇರಿದಂತೆ ಮೂವರು ನೀರುಪಾಲು

Sampriya
ಸೋಮವಾರ, 17 ಮಾರ್ಚ್ 2025 (18:51 IST)
ದಾವಣಗೆರೆ: ಅಕ್ಕ-ತಂಗಿ ಸೇರಿ ಮೂವರು ಮಹಿಳೆಯರು ಕೆರೆಯಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಇಂದು ಚನ್ನಗಿರಿ ಬಳಿ ಸಂಭವಿಸಿದೆ.

ಬಟ್ಟೆ ತೊಳೆಯಲು ಹೋಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.  30 ವರ್ಷದ ದೀಪಾರಾಣಿ, 26 ವರ್ಷದ ದಿವ್ಯಾ ಮತ್ತು 19 ವರ್ಷದ ಚಂದನಾ ಮೃತ ಮಹಿಳೆಯರು.

ಚನ್ನಗಿರಿ ಪಟ್ಟಣಕ್ಕೆ ಹೊಂದಿಕೊಂಡಿರುವ ಲಕ್ಷ್ಮಿಸಾಗರ-ದಿಗ್ಗೇನಹಳ್ಳಿ ಗ್ರಾಮದ ಮಧ್ಯೆ ಇರುವ ಹೊಸಕೆರೆಯಲ್ಲಿ ಬಟ್ಟೆ ತೊಳೆಯಲು ಅವರು ತೆರಳಿದ್ದರು. ಈ ವೇಳೆ ಚಂದನಾ ಈಜಲೆಂದು ಕೆರೆಗೆ ಇಳಿದಿದ್ದಾಳೆ.

ಕೆಸರಿನಲ್ಲಿ ಸಿಲುಕಿದ ಚಂದನಾಳನ್ನು ಕಾಪಾಡಲು ನೀರಿಗೆ ಇಳಿದ ಅಕ್ಕ ದಿವ್ಯಾ ಅವರೂ ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾಳೆ. ಇಬ್ಬರನ್ನು ರಕ್ಷಿಸಲು ಮುಂದಾದ ದೀಪಾರಾಣಿಯೂ ಸಾವನ್ನಪ್ಪಿದ್ದಾರೆ. ದೀಪಾರಾಣಿ ನೆರೆಹೊರೆಯ ನಿವಾಸಿಯಾಗಿದ್ದಾರೆ.

ದೀಪಾರಾಣಿ ಮತ್ತು ದಿವ್ಯಾ ಅವರಿಗೆ ವಿವಾಹವಾಗಿದೆ. ದೀಪಾರಾಣಿಗೆ ಮೂವರು ಮಕ್ಕಳಿದ್ದರೆ, ದಿವ್ಯಾಗೆ ಒಂದು ವರ್ಷದ ಮಗುವಿದೆ. ಚಂದನಾ ಅವಿವಾಹಿತೆಯಾಗಿದ್ದಾರೆ. ಮೃತರ ಕುಟುಂಬದವರ ರೋಧನ ಮುಗಿಲು ಮುಟ್ಟಿದೆ.

ಚನ್ನಗಿರಿ ಅಗ್ನಿಶಾಮಕ ದಳದ ಕುಮಾರ್ ಮತ್ತು ಸಿಬಂದಿ ಸ್ಥಳಕ್ಕೆ ಧಾವಿಸಿ ಮೂವರ ಶವಗಳನ್ನು ಮೇಲೆಕ್ಕೆ ಎತ್ತಿದ್ದಾರೆ. ತಹಶೀಲ್ದಾರ್ ಎನ್.ಜೆ. ನಾಗರಾಜ್, ಸರ್ಕಲ್‌ ಇನ್‌ಸ್ಪೆಕ್ಟರ್‌ ಕೆ. ರವೀಶ್ ಸ್ಥಳ ಪರಿಶೀಲನೆ ನಡೆಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments