Webdunia - Bharat's app for daily news and videos

Install App

ಕೆಂಪು ಮರ್ಕ್ಯುರಿ ಹೆಸರಿನಲ್ಲಿ ಅಲ್ಯುಮಿನಿಯಂ ಮಾರುತ್ತಿದ್ದ ಮೂವರ ಬಂಧನ

Webdunia
ಗುರುವಾರ, 1 ಜನವರಿ 2015 (16:07 IST)
ಬೆಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಸಂದರ್ಭದಲ್ಲಿ ಕೆಂಪು ಮರ್ಕ್ಯುರಿ ಹೆಸರನ್ನು ಬಳಸಿಕೊಂಡು ಅಲ್ಯುಮಿನಿಯಂ ಬ್ಲಾಕ್ ಮಾರುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಎಲ್‌ಟಿಟಿಇ ಮುಖಂಡ ಪ್ರಭಾಕರನ್ ಹತ್ಯೆಯ ಬಳಿಕ ಭಾರತಕ್ಕೆ ಕೆಂಪು ಮರ್ಕ್ಯುರಿ ರವಾನೆಯಾಗುತ್ತಿದೆ. ಎಲ್‌ಟಿಟಿಇ ಬಳಿ ಈ ಕೆಂಪು ಮರ್ಕ್ಯುರಿ ಇದ್ದಿತೆಂದು ಹೇಳಲಾಗುತ್ತಿದೆ.

ಎಲ್ಟಿಟಿಇ ನಾಶವಾದ ಬಳಿಕ ಕೆಂಪು ಮರ್ಕ್ಯುರಿ  ಭಾರತಕ್ಕೆ ಅಕ್ರಮವಾಗಿ ರವಾನೆಯಾಗಿದೆಯೆಂದು ಹೇಳಲಾಗುತ್ತಿದೆ. ಕೆಂಪು ಮರ್ಕ್ಯುರಿಯನ್ನು ನ್ಯೂಕ್ಲಿಯರ್ ಬಾಂಬ್ ತಯಾರಿಕೆಗೆ ಬಳಸಲಾಗುತ್ತಿದೆ. ಸಿಸಿಬಿ ಪೊಲೀಸರು ಖರೀದಿದಾರರ ವೇಷದಲ್ಲಿ ಕೆಂಪು ಮರ್ಕ್ಯುರಿಯನ್ನು ಖರೀದಿಸುವ ನೆಪದಲ್ಲಿ ತೆರಳಿ ಅವರನ್ನು ಬಂಧಿಸಿದ್ದಾರೆ.

8.9 ಕೆಜಿ ಅಲ್ಯುಮಿನಿಯಂ ಬ್ಲಾಕನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಗಂಡನ್, ಹನೀಫ್, ನಾಗರಾಜ್ ಎಂಬವರನ್ನು ಬಂಧಿಸಲಾಗಿದೆ. ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಹೊಸೂರು ಮೂಲದ ಪ್ರಮುಖ ಆರೋಪಿ ಜಯಸಿಂಗ್ ನಾಪತ್ತೆಯಾಗಿದ್ದು ಪೊಲೀಸರು ಶೋಧ ನಡೆಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

Show comments