Select Your Language

Notifications

webdunia
webdunia
webdunia
webdunia

ಕೂಪನ್ ಮೂಲಕ ಪಡಿತರ ಧಾನ್ಯ ವಿತರಣೆ: ಖಾದರ್

ಕೂಪನ್
ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಅಗಸ್ಟ್‌ ತಿಂಗಳಿನಿಂದ ಕೂಪನ್ ಮೂಲಕ ಪಡಿತರ ಧಾನ್ಯ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದರು.
 
ನಕಲಿ ಕಾರ್ಡ್‌ಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಅಗಸ್ಟ್ ತಿಂಗಳಿಂದ ಪ್ರಾಯೋಗಿಕವಾಗಿ ಕೂಪನ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಈ ಯೋಜನೆ ಯಶಸ್ವಿಯಾದರೇ ರಾಜ್ಯದ ವಿವಿಧ ಭಾಗಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದರು.
 
ಕೂಪನ್‌ ಹೊಂದಿರುವ ಫಲಾನುಭವಿಗಳು ನ್ಯಾಯಬೆಲ್ ಅಂಗಡಿಗೆ ಹೋಗಿ ಆಹಾರ ಪದಾರ್ಥಗಳನ್ನು ಪಡೆಯಬೇಕಂತ್ತಿಲ್ಲ. ಯಾವುದೇ ಅಂಗಡಿಯಿಂದಲೂ ಪಡಿತರ ಪಡೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಈ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗೆ ಪೂರೈಕೆ ಮಾಡುವ ಧಾನ್ಯಗಳ ಪ್ರಮಾಣವನ್ನು 10 ಪ್ರತಿಶತ ಏರಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
 
 ಈ ಹಿಂದೆ ಸೀಮೆ ಎಣ್ಣೆಯನ್ನು ಪಡಿತರ ಪಲಾನುಭವಿಗಳಿಗೆ ಕೂಪನ್ ಮೂಲಕ ವಿತರಿಸಲಾಗುತ್ತಿತ್ತು. ಈ ಯೋಜನೆ ಯಶಸ್ವಿಯಾಗಿರುವ ಬೆನ್ನಲ್ಲಿ ಪಡಿತರ ಧಾನ್ಯವನ್ನು ಕೂಪನ್ ಮೂಲಕ ವಿತರಿಸಲು ನಿರ್ಧರಿಸಲಾಗಿದೆ. 
 
ಈ ಯೋಜನೆ ಯಶಸ್ವಿಗೊಳ್ಳಲು ಬೆಂಗಳೂರು ಮಹಾನಗರ ಪಾಲಿಕೆಯ ಪ್ರತಿನಿಧಿಗಳು ಸಹಕರಿಸಬೇಕು ಎಂದು ವಿನಂತಿಸಿಕೊಂಡರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಾರಿಗೆ ಸಂಚಾರ ಅಸ್ತವ್ಯಸ್ಥ: ಸರಕಾರ ಮಧ್ಯಪ್ರವೇಶಕ್ಕೆ ಯಡಿಯೂರಪ್ಪ ಮನವಿ