Webdunia - Bharat's app for daily news and videos

Install App

ಕೂಪನ್ ಮೂಲಕ ಪಡಿತರ ಧಾನ್ಯ ವಿತರಣೆ: ಖಾದರ್

Webdunia
ಸೋಮವಾರ, 25 ಜುಲೈ 2016 (18:15 IST)
ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಅಗಸ್ಟ್‌ ತಿಂಗಳಿನಿಂದ ಕೂಪನ್ ಮೂಲಕ ಪಡಿತರ ಧಾನ್ಯ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದರು.
 
ನಕಲಿ ಕಾರ್ಡ್‌ಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಅಗಸ್ಟ್ ತಿಂಗಳಿಂದ ಪ್ರಾಯೋಗಿಕವಾಗಿ ಕೂಪನ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಈ ಯೋಜನೆ ಯಶಸ್ವಿಯಾದರೇ ರಾಜ್ಯದ ವಿವಿಧ ಭಾಗಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದರು.
 
ಕೂಪನ್‌ ಹೊಂದಿರುವ ಫಲಾನುಭವಿಗಳು ನ್ಯಾಯಬೆಲ್ ಅಂಗಡಿಗೆ ಹೋಗಿ ಆಹಾರ ಪದಾರ್ಥಗಳನ್ನು ಪಡೆಯಬೇಕಂತ್ತಿಲ್ಲ. ಯಾವುದೇ ಅಂಗಡಿಯಿಂದಲೂ ಪಡಿತರ ಪಡೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಈ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗೆ ಪೂರೈಕೆ ಮಾಡುವ ಧಾನ್ಯಗಳ ಪ್ರಮಾಣವನ್ನು 10 ಪ್ರತಿಶತ ಏರಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
 
 ಈ ಹಿಂದೆ ಸೀಮೆ ಎಣ್ಣೆಯನ್ನು ಪಡಿತರ ಪಲಾನುಭವಿಗಳಿಗೆ ಕೂಪನ್ ಮೂಲಕ ವಿತರಿಸಲಾಗುತ್ತಿತ್ತು. ಈ ಯೋಜನೆ ಯಶಸ್ವಿಯಾಗಿರುವ ಬೆನ್ನಲ್ಲಿ ಪಡಿತರ ಧಾನ್ಯವನ್ನು ಕೂಪನ್ ಮೂಲಕ ವಿತರಿಸಲು ನಿರ್ಧರಿಸಲಾಗಿದೆ. 
 
ಈ ಯೋಜನೆ ಯಶಸ್ವಿಗೊಳ್ಳಲು ಬೆಂಗಳೂರು ಮಹಾನಗರ ಪಾಲಿಕೆಯ ಪ್ರತಿನಿಧಿಗಳು ಸಹಕರಿಸಬೇಕು ಎಂದು ವಿನಂತಿಸಿಕೊಂಡರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಪಿ ಅಲ್ಲ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಇದೇ: ಡಾ ಸಿಎನ್ ಮಂಜುನಾಥ್

Karnataka Weather: ಕರಾವಳಿ ಜಿಲ್ಲೆಯವರೇ ಇಂದು ಎಚ್ಚರ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ಮುಂದಿನ ಸುದ್ದಿ
Show comments