Webdunia - Bharat's app for daily news and videos

Install App

3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ

Webdunia
ಮಂಗಳವಾರ, 10 ಆಗಸ್ಟ್ 2021 (12:51 IST)
ಬೆಂಗಳೂರು (ಆ.10):  ಆಗಸ್ಟ್ 12ರವರೆಗೆ ಕರಾವಳಿ ಕರ್ನಾಟಕದ ಬಹುತೇಕ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಅವಧಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇಲ್ಲ. ಆಗ್ನೇಯ ಅರಬ್ಬಿ ಸಮುದ್ರ, ಕೇರಳ ಕರಾವಳಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಮೀ ತಲುಪುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಗಳಿವೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉಳಿದಂತೆ ಸೋಮವಾರ ಬೆಳಗ್ಗೆ 8-30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ನೈಋುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಮತ್ತು ಉತ್ತರ ಒಳನಾಡು ಹಾಗು ಕರಾವಳಿಯಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಬೆಳಗಾವಿಯ ಕಟ್ಕೋಳ್ನಲ್ಲಿ 4 ಸೆಂ.ಮೀ, ಬಾಗಲಕೋಟೆಯ ಕೆರೂರು, ಕೊಡಗಿನ ಭಾಗಮಂಡಲ, ಮೈಸೂರಿನ ಸಾಲಿಗ್ರಾಮ, ಬೆಂಗಳೂರು ನಗರದ ಜ್ಞಾನಭಾರತಿ ಬಿಯು ಕ್ಯಾಂಪಸ್, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಉಡುಪಿಯ ಕೊಲ್ಲೂರು, ಕೋಲಾರ, ದಾವಣಗೆರೆಯ ಚನ್ನಗಿರಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ಟೀನಿಯರ ಮೇಲೆ ಇಸ್ರೇಲ್ ದಾಳಿ, 70ಕ್ಕೂ ಅಧಿಕ ಮಂದಿ ಸಾವು

ಭಾವನ ಜತೆ ಅಕ್ರಮ ಸಂಬಂಧ, ಪತಿಗೆ ಕರೆಂಟ್ ಶಾಕ್ ಕೊಟ್ಟು ಸಹಜ ಸಾವು ಎಂದು ಬಿಂಬಿಸಿದ ಪತ್ನಿ

ಮುಂದಿನ ಸುದ್ದಿ
Show comments