3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ

Webdunia
ಮಂಗಳವಾರ, 10 ಆಗಸ್ಟ್ 2021 (12:51 IST)
ಬೆಂಗಳೂರು (ಆ.10):  ಆಗಸ್ಟ್ 12ರವರೆಗೆ ಕರಾವಳಿ ಕರ್ನಾಟಕದ ಬಹುತೇಕ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಅವಧಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇಲ್ಲ. ಆಗ್ನೇಯ ಅರಬ್ಬಿ ಸಮುದ್ರ, ಕೇರಳ ಕರಾವಳಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಮೀ ತಲುಪುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಗಳಿವೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉಳಿದಂತೆ ಸೋಮವಾರ ಬೆಳಗ್ಗೆ 8-30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ನೈಋುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಮತ್ತು ಉತ್ತರ ಒಳನಾಡು ಹಾಗು ಕರಾವಳಿಯಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಬೆಳಗಾವಿಯ ಕಟ್ಕೋಳ್ನಲ್ಲಿ 4 ಸೆಂ.ಮೀ, ಬಾಗಲಕೋಟೆಯ ಕೆರೂರು, ಕೊಡಗಿನ ಭಾಗಮಂಡಲ, ಮೈಸೂರಿನ ಸಾಲಿಗ್ರಾಮ, ಬೆಂಗಳೂರು ನಗರದ ಜ್ಞಾನಭಾರತಿ ಬಿಯು ಕ್ಯಾಂಪಸ್, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಉಡುಪಿಯ ಕೊಲ್ಲೂರು, ಕೋಲಾರ, ದಾವಣಗೆರೆಯ ಚನ್ನಗಿರಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಸಂಬಂಧ ಆರೋಪ: ಚಾಕುವಿನಿಂದ ಇರಿದು ವ್ಯಕ್ತಿಯ ಮರ್ಡರ್

ಸಿಎಂ ಆಗುವ ಆಸೆಯನ್ನು ಪೂರೈಸಿಕೊಂಡಿರುವ ಡಿಕೆಶಿಗೆ ಸವಾಲುಗಳು ಹಲವು

ಗೋವಿಂದಪುರ 6ಜನರ ಹತ್ಯೆ ಪ್ರಕರಣ: ತನಿಯಲ್ಲಿ ಮಹತ್ವದ ಬೆಳವಣಿಗೆ

ಬಿರಿಯಾನಿ ಹಾಗೇ ಹುಲ್ಲು ಸೇವಿಸಿದ ಯುವಕ, ಇವನ ಆರೋಗ್ಯದ ಕತೆಯೇನು, Video

ಮುಂದಿನ ಸುದ್ದಿ
Show comments