ಕರಾವಳಿಯ 40 ಕಡೆ ಚಂಡಮಾರುತದ ಅಲರ್ಟ್ ವ್ಯವಸ್ಥೆ..!

Webdunia
ಮಂಗಳವಾರ, 17 ಆಗಸ್ಟ್ 2021 (15:40 IST)
ಬೆಂಗಳೂರು:ಮೀನುಗಾರರಿಗೆ ಹಾಗೂ ಸಮುದ್ರದ ತೀರ ನಿವಾಸಿಗಳಿಗೆ ಚಂಡಮಾರುತದ ರಕ್ಷಣೆ ನೀಡುವ ನಿಟ್ಟಿನಲ್ಲಿ ಚಂಡಮಾರುತದ ಬಗ್ಗೆ ಎಚ್ಚರಿಸುವ ಅಲಾರಾಂ ವ್ಯವಸ್ಥೆಯನ್ನು ಕರಾವಳಿಯಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ. ಕರಾವಳಿ ಪ್ರದೇಶದ ಒಟ್ಟು 40 ಕಡೆಗಳಲ್ಲಿ ಅಲಾರಾಂ ವ್ಯವಸ್ಥೆ ಅಳವಡಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಚಂಡಮಾರುತದ ಅಬ್ಬರದ ಬಗ್ಗೆ ಅಲರಾಂ ಮೂಲಕ ಎಚ್ಚರಿಕೆ ನೀಡುವ ಅಲರ್ಟ್ ಸಿಸ್ಟಮ್ ವ್ಯವಸ್ಥೆಯನ್ನು
ಕರಾವಳಿ ಭಾಗದ 40 ಕಡೆ ಅನುಷ್ಠಾನ ಮಾಡುತ್ತೇವೆ. ಕೇಂದ್ರ ಸರ್ಕಾರದಿಂದ ಇದಕ್ಕೆ ಹಣ ಬರಲಿದೆ. ಒಂದೊಂದು ಸಿಸ್ಟಂಗೆ 12 ಕೋಟಿ ರೂ. ಖರ್ಚಾಗುತ್ತದೆ. ಈ ಅಲಾರಾಂಗಳು ಆರೇಳು ಕಿಮೀವರೆಗೆ ಸೈರನ್ ಮಾಡಲಿದೆ ಎಂದರು.
ಈ ಮೂಲಕ ತೀರ ಪ್ರದೇಶದ ಜನರಿಗೆ, ಮೀನುಗಾರಿಗೆ ಚಂಡಮಾರುತಗಳ ಸುಳಿವನ್ನು ನೀಡಲಾಗುವುದು. ಇದರಿಂದ ಕರಾವಳಿ ಭಾಗದ ಜನರಿಗೆ ಅನುಕೂಲವಾಗಲಿದೆ ಅದರಲ್ಲೂ ಮೀನುಗಾರರಿಗೆ ಇದು ಹೆಚ್ಚು ಉಪಯೋಗವಾಗಲಿದೆ ಎಂದು ತಿಳಿಸಿದರು. ನಾನು ಈಗಾಗಲೇ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದೇನೆ. ಒಂದೆರಡು ಭಾರಿ ನಾನು ಹೋಗಿದ್ದೇನೆ. ಪ್ರವಾಹ ಸಂದರ್ಭಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.
ಇನ್ನು, ಸಿಡಿಲಿನಿಂದ ಹಲವರು ಸಾಯುತ್ತಿದ್ದಾರೆ. ಅದರ ಅಲರ್ಟ್ನೆಸ್ ಬಗ್ಗೆ ಯೋಜನೆ ಕೈಗೊಳ್ಳಲಾಗಿದೆ. ಒಂದೂವರೆ ಕಿಮೀವರೆಗೆ ಕೇಳಿಸುವಷ್ಟು
ಮೈಕ್ ಸಿಸ್ಟಂ ಮೂಲಕ ಅಲರ್ಟ್ ಮಾಡಲಾಗುತ್ತದೆ. ಗ್ರಾಮ ಪಂಚಾಯಿತಿಗಳಲ್ಲಿ ಅಲರ್ಟ್ ಆಗಲಿದೆ. ಈ ಹೊಸ ಸಿಸ್ಟಮ್ನ್ನು ಅಳವಡಿಕೆ ಮಾಡುತ್ತೇವೆ ಎಂದು ಆರ್ ಅಶೋಕ್ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಕುಸ್ತಿ ಕದನದ ನಡುವೆ ಮತ್ತೊಂದು ಬೆಲೆ ಏರಿಕೆಗೆ ಸಿದ್ಧವಾಯ್ತಾ ಸರ್ಕಾರ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments