Webdunia - Bharat's app for daily news and videos

Install App

ರಾಜಧಾನಿಯಲ್ಲಿ ಗುಡುಗು ಸಹಿತ ವರ್ಷಧಾರೆ: ಇನ್ನೂ 5 ದಿನ ಮಳೆ ಸಾಧ್ಯತೆ

sampriya
ಶನಿವಾರ, 1 ಜೂನ್ 2024 (17:29 IST)
Photo By X
ಬೆಂಗಳೂರು: ರಾಜ್ಯ ರಾಜಧಾನಿಯ ಹಲವಡೆ ಇಂದು ಮಳೆಯಾಗುತ್ತಿದೆ. ಆರ್‌.ಟಿ. ನಗರ, ಕಾರ್ಪೊರೇಷನ್, ಟೌನ್‌ಹಾಲ್, ಕೆ.ಆರ್‌.ಮಾರ್ಕೆಟ್‌, ಮಲ್ಲೇಶ್ವರಂ, ಯಶವಂತಪುರ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಸುರಿದಿದೆ.

ಬಿಸಿಲಿನಿಂದ ತತ್ತರಿಸಿದ್ದ ಸಿಲಿಕಾನ್​ ಸಿಟಿ ಜನರಿಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ. ಸದ್ಯ ನಗರದೆಲ್ಲೆಡೆ ಮೋಡಕವಿದ ವಾತಾವರಣವಿದ್ದು, ಇಂದಿನಿಂದ ಐದು ದಿನ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ‌ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಮುಂಗಾರು ಕೇರಳ ಪ್ರವೇಶಿಸಿದೆ. ನಂತರ ನಮ್ಮ ರಾಜ್ಯಕ್ಕೆ ಪ್ರವೇಶಿಸಲಿದೆ. ನಾಳೆಯಿಂದ ರಾಜಾಧಾನಿಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಆನೇಕಲ್, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಳೆ ಆಗಿದೆ. ಧಾರಾಕಾರ ಮಳೆಯಿಂದ ಚಂದಾಪುರದ ಬಳಿ ಸರ್ವಿಸ್ ರಸ್ತೆ ಜಲಾವೃತವಾಗಿದ್ದು, ಮಳೆ ನೀರು ಹೊರಹೋಗಲು ಜಾಗವಿಲ್ಲದೆ ರಸ್ತೆ ಕೆರೆಯಂತಾಗಿದೆ.  

ಶಕೆ ಅನುಭವದಿಂದ ಬೆಸತ್ತಿದ್ದ ಜನರಿಗೆ ಇದೀಗ ವರುಣ ತಂಪೆರೆದಿದ್ದು, ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡಿದ್ದು, ಮಳೆ ಹಿನ್ನಲೆ ಅಂಡರ್ ಪಾಸ್, ಫ್ಲೈ ಓವರ್ ಕೆಳಗಡೆ ಜನರು ಆಸರೆ ಪಡೆದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮೋದಿ, ಹಣಕಾಸು ಸಚಿವರನ್ನು ಬಿಟ್ರೆ ಭಾರತದ ಆರ್ಥಿಕತೆ ಸತ್ತಿದೆ ಎಂದು ಜಗತ್ತಿಗೆ ಗೊತ್ತು: ರಾಹುಲ್ ಗಾಂಧಿ

ಮಹದೇವಪುರ, ರಾಜಾಜಿನಗರದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯಲ್ಲಿ ಸಾಕ್ಷಿಯಿದೆ: ಸಿದ್ದರಾಮಯ್ಯ

ಪ್ರಮೋದ್ ಮುತಾಲಿಕ್ ಜತೆ ಕಾಣಿಸಿಕೊಂಡ ನಯನಾ ಮೋಟಮ್ಮ, ಕುತೂಹಲ ಕೆರಳಿಸಿದ ಶಾಸಕಿ ನಡೆ

ಮುಂದಿನ ಸುದ್ದಿ
Show comments