Webdunia - Bharat's app for daily news and videos

Install App

ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮುಂದಿನ 28 ಗಂಟೆಯಲ್ಲಿ ಸಹಿತ ಗುಡುಗು ಮಳೆ

Webdunia
ಶುಕ್ರವಾರ, 26 ಮೇ 2023 (14:05 IST)
ನಗರದಲ್ಲಿ ಸಂಜೆ ರಾತ್ರಿ ವೇಳೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿದ ಹಿನ್ನಲೆ ಕರ್ನಾಟಕದ ಮೇಲೆ ಸಹ ಪರಿಣಾಮ ಬೀರಲಿದೆ. ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ತಲುಪಲಿದೆ.ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
 
ದಕ್ಷಿಣ ಒಳನಾಡು ಸೇರಿ ಕರಾವಳಿ ಹಾಗೂ ಉತ್ತರ ಒಳನಾಡು ಭಾಗದಲ್ಲಿ ಸಹ ಗುಡುಗು ಸಹಿತ ಮಳೆಯಾಗುತ್ತದೆ.ಮುಂದಿನ ಐದು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು,ರಾಮನಗರ ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಒಳನಾಡಿನ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು,ಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments