Webdunia - Bharat's app for daily news and videos

Install App

ತುಂಗಭದ್ರ ಡ್ಯಾಮ್ ಗೇಟ್ ಸಮಸ್ಯೆಯಿಂದ ತೆಲಂಗಾಣಕ್ಕೂ ಶುರುವಾಗಿದೆ ಆತಂಕ

Krishnaveni K
ಸೋಮವಾರ, 12 ಆಗಸ್ಟ್ 2024 (10:25 IST)
Photo Credit: X
ಕೊಪ್ಪಳ: ತುಂಗಭದ್ರ ಜಲಾಶಯದ 19 ನೇ ಕ್ರಸ್ಟ್ ಗೇಟ್ ನ ಚೈನ್ ಕಟ್ ಆಗಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಕರ್ನಾಟಕದ ಬಯಲು ಸೀಮೆ ಮಾತ್ರವಲ್ಲದೆ, ಪಕ್ಕದ ತೆಲಂಗಾಣದ ಜನರಲ್ಲೂ ಆತಂಕದ ಕಾರ್ಮೋಡ ಕವಿದಿದೆ.

ತುಂಬಿರುವ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು ಸುತ್ತಮುತ್ತಲ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್, ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ತಜ್ಞರ ಜೊತೆ ಸಭೆ ನಡೆಸಿ ಶೀಘ್ರದಲ್ಲೇ ಗೇಟ್ ಸರಿಪಡಿಸಲು ಸೂಚಿಸಿದ್ದಾರೆ. ಆದರೆ ಗೇಟ್ ಸರಿಪಡಿಸುವುದು ಅಷ್ಟು ಸುಲಭದ ಕೆಲಸವಲ್ಲ. ಹೀಗಾಗಿ ದುರಸ್ತಿಯಾಗಬೇಕಾದರೆ ಇನ್ನೂ ಒಂದು ವಾರವಾಗಬಹುದು ಎನ್ನಲಾಗಿದೆ.

ಹೀಗಾಗಿ ಕೇವಲ ಕರ್ನಾಟಕ ಮಾತ್ರವಲ್ಲ, ಪಕ್ಕದ ತೆಲಂಗಾಣ ರಾಜ್ಯದ ಜನರಿಗೂ ಆತಂಕ ಎದುರಾಗಿದೆ. ಡ್ಯಾಂನಲ್ಲಿ 100 ಟಿಎಂಸಿ ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವಿದೆ. ಆದರೆ ಭಾರೀ ಮಳೆಯಿಂದಾಗಿ ಅಪಾರ ನೀರು ಸಂಗ್ರಹವಾಗಿದೆ. ತೆಲಂಗಾಣದ ರೈತ ಸಮೂಹದಲ್ಲೂ ಪ್ರವಾಹದ ಭೀತಿ ಎದುರಾಗಿದೆ.

ಇನ್ನು, ಈ ವಿಚಾರವಾಗಿ ರಾಜಕೀಯ ನಾಯಕರು ಕೆಸರೆರಚಾಟ ಮಾಡುತ್ತಿದ್ದಾರೆ. ಇಂದು ಬಿಜೆಪಿ ನಾಯಕರ ನಿಯೋಗ ತುಂಗ ಭದ್ರ ಜಲಾಶಯದ ಸ್ಥಿತಿಗತಿ ಅರಿಯಲು ಭೇಟಿ ನೀಡಲಿದೆ. ನಾಳೆ ಸಿಎಂ ಸಿದ್ದರಾಮಯ್ಯ ಕೂಡಾ ಜಲಾಶಯಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments