Webdunia - Bharat's app for daily news and videos

Install App

ಯಡಿಯೂರಪ್ಪ ಸಮ್ಮುಖದಲ್ಲೆ ಟಿಕೆಟ್ ಗಾಗಿ ಕಿತ್ತಾಟ

Webdunia
ಶನಿವಾರ, 1 ಸೆಪ್ಟಂಬರ್ 2018 (17:46 IST)
ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಬಿಜೆಪಿ ನಾಯಕರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.
ಕಲಬುರಗಿ ನಗರದ ಐವಾನ್ ಇ ಶಾಹಿ ಅತಿಥಿ ಗೃಹದ ಬಳಿ ನಡೆದಿದೆ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ  ಸಮ್ಮುಖದಲ್ಲಿಯೇ ಬಿಜೆಪಿ ನಾಯಕರಾದ ಸುಭಾಷ್ ರಾಥೋಡ ಹಾಗೂ ಮಾಜಿ ಸಚಿವ  ಬಾಬುರಾವ್ ಚವ್ಹಾಣ ಕಿತ್ತಾಡಿಕೊಂಡಿದ್ದಾರೆ.

ಸುಭಾಷ್ ರಾಥೋಡ್‌ಗೆ ಕಲಬುರಗಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದ್ರು. ಈ ವೇಳೆ ಅಲ್ಲಿಯೇ ಇದ್ದ ಮಾಜಿ ಸಚಿವ ಬಾಬುರಾವ್ ಚವ್ಹಾಣ, ವಯಕ್ತಿಕವಾಗಿ ಮನವಿ ಮಾಡಿ, ಬಂಜಾರಾ ಸಮುದಾಯದಿಂದ ಅಂತಾ ಏಕೆ ಹೇಳ್ತಿರಿ ಎಂದು ಬಾಬುರಾವ್ ಚವ್ಹಾಣ ಪ್ರಶ್ನೆ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸುಭಾಸ ರಾಠೋಡ ಹಾಗೂ ಚವ್ಹಾಣ ಮಧ್ಯೆ ವಾಗ್ವಾದ ನಡೆಯಿತು. ಇದ್ರಿಂದ ಕೋಪಗೊಂಡ ಬಿಎಸ್ ವೈ ಸರ್ವೇ ಮಾಡಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡೋದಾಗಿ ಹೇಳಿ ಅಲ್ಲಿಂದ ಸಿಟ್ಟಿನಿಂದಲೇ ಹೊರಟು ಹೋದ್ರು.

ಬಿಎಸ್‌ವೈ ತೆರಳಿದ ಬಳಿಕ ಸುಭಾಷ ರಾಥೋಡ್ ಬೆಂಬಲಿಗರು ಹಾಗೂ ಬಾಬುರಾವ್ ಚವ್ಹಾಣ್ ಮಧ್ಯೆ ವಾಗ್ವಾದ ನಡೆಯಿತು. ಇಬ್ಬರ ಬೆಂಬಲಿಗರು ಕೂಡ ಪರಸ್ಪರ ಬೈದಾಡಿಕೊಂಡಿದ್ದು ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿತು. ನಂತರ ಬಿಜೆಪಿ ಮುಖಂಡರು ಮಧ್ಯೆಸ್ಥಿಕೆ ವಹಿಸಿ ಇಬ್ಬರನ್ನೂ ಸಮಾಧಾನಪಡಿಸಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments