Webdunia - Bharat's app for daily news and videos

Install App

ಟಿಕೆಟ್ ದರ ಮೂರು ಪಟ್ಟು - ಪ್ರಯಾಣಿಕರ ವಸೂಲಿಗೆ ಇಳಿದ ಖಾಸಗಿ ವಾಹನಗಳು

Webdunia
ಸೋಮವಾರ, 23 ಮಾರ್ಚ್ 2020 (18:38 IST)
ಕೊರೊನಾ ಪಿಡುಗನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ  ಸಾರಿಗೆ  ಸಂಸ್ಥೆಗಳ ಬಸ್ಸುಗಳ ಮತ್ತು ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಖಾಸಗಿ ವಾಹನಗಳು ದುಪ್ಪಟ್ಟು ಟಿಕೆಟ್ ದರ ವಿಧಿಸುತ್ತಿವೆ.


ಕೊರೊನಾ ವೈರಸ್  ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ಸುಲಿಗೆ ಮಾಡಿ ಕೆಲವೆಡೆ ಖಾಸಗಿ ವಾಹನಗಳು, ಖಾಸಗಿ ಬಸ್ಸುಗಳ ಮತ್ತು ಆಟೋರಿಕ್ಷಾಗಳ  ಮಾಲೀಕರು ಪ್ರಯಾಣಿಕರನ್ನು ಶೋಷಿಸುತ್ತಿದ್ದಾರೆ. ರಾಜ್ಯದ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳು ಕಂಡು ಬರುತ್ತಿದ್ದು, ಅಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಲಕ್ಷ್ಮಣ ಸವದಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಕೆಲವು ಜಿಲ್ಲೆಗಳನ್ನು ಈಗಾಗಲೇ ಲಾಕ್ ಔಟ್ ಜಿಲ್ಲೆಗಳೆಂದು ಘೋಷಿಸಲಾಗಿದ್ದು,  ಇಂತಹ ಕಡೆಗಳಿಗೆ ಅಂತರ್ ಜಿಲ್ಲಾ  ಬಸ್ಸುಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತರಕ್ಷಣೆಯನ್ನು ಗಮನಿಸಿ ಕೈಗೊಳ್ಳಲಾದ ಸರ್ಕಾರದ ಈ ನಿರ್ಧಾರವನ್ನು ಯಾರೂ  ಉಲ್ಲಂಘಿಸಬಾರದು. ಈಗಾಗಲೇ ಇಂತಹ ಪ್ರಕರಣಗಳನ್ನು ತಡೆಗಟ್ಟಬೇಕೆಂದು ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments