Webdunia - Bharat's app for daily news and videos

Install App

ಕಂಬಕ್ಕೆ ಕಟ್ಟಿಹಾಕಿ ಕಳ್ಳನಿಗೆ ಥಳಿತ

Webdunia
ಶನಿವಾರ, 2 ಫೆಬ್ರವರಿ 2019 (14:38 IST)
ಕತ್ತಲ ರಾತ್ರಿಯಲ್ಲಿ ಮಾಡಬಾರದ್ದನ್ನು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಭೂಪನನ್ನು ಕಂಬಕ್ಕೆ ಕಟ್ಟಿ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ.  

ಅಡಿಕೆ ಕದಿಯಲು ಬಂದ ಯುವಕರನ್ನು ರೈತರು ಹಿಡಿದು ಕಂಬಕ್ಕೆ ಕಟ್ಟಿದ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ತಡ ರಾತ್ರಿ ನಡೆದಿದೆ.

ಕಳೆದ ಆರು ತಿಂಗಳಿನಿಂದ ಬೂಕನಕೆರೆ ಗ್ರಾಮದ ಸುತ್ತಮುತ್ತಲಿನ ಅಡಿಕೆ ತೋಟಗಳು ಹಾಗೂ ಅಡಿಕೆ ಗೋದಾಮಿನಲ್ಲಿ ಕಳ್ಳತನ ಮಾಡುತ್ತಿದ್ದ ಯುವಕರು, ಗ್ರಾಮಸ್ಥರ ನಿದ್ದೆಗೆಡಿಸಿದ್ದರು. ಹೊಸಹೊಳಲು ಗ್ರಾಮದ ಚಂದು ತನ್ನ ಸ್ನೇಹಿತರಾದ ಹೇಮಂತ, ಅಶೋಕ, ಗುಂಡ ಅವರೊಂದಿಗೆ ಎರಡು ಬೈಕುಗಳು ಹಾಗೂ ಒಂದು ಆಫೆ ಆಟೋವನ್ನು ತೆಗೆದುಕೊಂಡು ಬಂದು ಕಳ್ಳತನ ಮಾಡುತ್ತಿದ್ದ.

ಅಡಿಕೆ ಗೋದಾಮಿನಲ್ಲಿ ತಡರಾತ್ರಿ ಸದ್ದು ಕೇಳಿಸಿದ ಹಿನ್ನೆಲೆಯಲ್ಲಿ ನಿದ್ರೆಯಿಂದ ಎಚ್ಚೆತ್ತ ವೀರೇಶ್ ಮತ್ತು ಸತೀಶ್ ಕಳ್ಳತನ ಮಾಡುತ್ತಿದ್ದ ಚಂದು(25)ವನ್ನು ಹಿಡಿದರು. ಇನ್ನು ಮೂವರು ಕತ್ತಲಿನಲ್ಲಿ ಓಡಿ ನಾಪತ್ತೆಯಾದರು. ಕಳೆದ ಎರಡು ಬಾರಿ ಕಳ್ಳತನ ನಡೆಸಿ ಚಾಕಚಕ್ಯತೆ ಪ್ರದರ್ಶಿಸಿದ್ದ ಕಳ್ಳರು, ಮೂರನೇ ಬಾರಿ ಕಳ್ಳತನ ಮಾಡಲು ಬಂದಿದ್ದಾಗ ಸಿಕ್ಕಿಬಿದ್ದಿದ್ದಾರೆ. ಹೊಸಹೊಳಲು ಗ್ರಾಮದ ಯುವಕ ಚಂದುನನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿದ ಬೂಕನಕೆರೆ ಗ್ರಾಮಸ್ಥರು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments