Webdunia - Bharat's app for daily news and videos

Install App

ನವೆಂಬರ್ 26ರವರೆಗೆ ಸಮಯ ಕೊಡುತ್ತೇವೆ: ರೈತ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ

Webdunia
ಸೋಮವಾರ, 1 ನವೆಂಬರ್ 2021 (20:13 IST)
ಗಡಿಗಳಿಂದ ರೈತರನ್ನು ಹೊರಹಾಕಲು ಯತ್ನಿಸಿದರೆ, ಸರ್ಕಾರಿ ಕಚೇರಿಗಳು ಮಾರುಕಟ್ಟೆಗಳಾಗುತ್ತವೆ: ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್ ನವೆಂಬರ್ 26ರವರೆಗೆ ಸಮಯ ಕೊಡುತ್ತೇವೆ. ಅಷ್ಟರೊಳಗೆ ಕೇಂದ್ರ ಸರ್ಕಾರವು ವಿವಾದಾತ್ಮಕ ಕೃಷಿ ಕಾನೂನನ್ನು ಹಿಂತೆಗೆದುಕೊಳ್ಳದಿದ್ದರೆ ದೆಹಲಿ ಗಡಿಗಳಲ್ಲಿ ರೈತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕಳೆದ ಹನ್ನೊಂದು ತಿಂಗಳುಗಳಿಂದ ರೈತರು ದೆಹಲಿ ಗಡಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಹೋರಾಟ ನಡೆಸುತ್ತಿದ್ದಾರೆ. ಇದೇ ನವೆಂಬರ್ 26ಕ್ಕೆ ರೈತ ಹೋರಾಟ ಒಂದು ವರ್ಷವನ್ನು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರಾಕೇಶ್‌ ಟಿಕಾಯತ್‌ ಎಚ್ಚರಿಕೆ ನೀಡಿದ್ದಾರೆ.
“ಕೇಂದ್ರ ಸರ್ಕಾರಕ್ಕೆ ನವೆಂಬರ್ 26 ರವರೆಗೆ ಸಮಯವಿದೆ. ಅದರ ನಂತರ (ನವೆಂಬರ್ 27 ರಿಂದ) ಇನ್ನೂ ಹೆಚ್ಚಿನ ಸಂಖ್ಯೆಯ ರೈತರು ಹಳ್ಳಿಗಳಿಂದ ಟ್ರ್ಯಾಕ್ಟರ್‌ಗಳ ಮೂಲಕ ದೆಹಲಿ ಸುತ್ತಲೂ ನಡೆಯುತ್ತಿರುವ ಪ್ರತಿಭಟನಾ ಸ್ಥಳಗಳಗೆ (ದೆಹಲಿ ಗಡಿಗಳು) ತಲುಪುತ್ತಾರೆ. ಪ್ರತಿಭಟನೆಯ ಸ್ಥಳವನ್ನು ಬೃಹತ್ ಕೋಟೆಯನ್ನಾಗಿ ಬಲಪಡಿಸುತ್ತಾರೆ” ಎಂದು ಟಿಕಾಯತ್‌ ಟ್ವೀಟ್ ಮಾಡಿದ್ದಾರೆ.
ಎರಡು ದಿನಗಳಲ್ಲಿ ಕೇಂದ್ರಕ್ಕೆ ಇದು ಎರಡನೇ ಎಚ್ಚರಿಕೆಯಾಗಿದೆ. ದೆಹಲಿ ಗಡಿಯಿಂದ ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಲು ಪ್ರಯತ್ನಿಸಿದರೆ ಸರ್ಕಾರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಟಿಕಾಯತ್‌ ಭಾನುವಾರ ಎಚ್ಚರಿಕೆ ನೀಡಿದ್ದರು.
ಕಳೆದ ವರ್ಷ ಜಾರಿಗೆ ತಂದ ಮೂರು ಕಾನೂನುಗಳು ತಮ್ಮ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಕಳೆದ ವರ್ಷ ನವೆಂಬರ್ 26 ರಿಂದ ರೈತರು ದೆಹಲಿಯ ಮೂರು ಗಡಿ ಬಿಂದುಗಳಾದ ಟಿಕ್ರಿ, ಸಿಂಘು ಮತ್ತು ಗಾಜಿಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತ ರೈತರ ಮೇಲೆ ಹಲವು ಭಾರೀ ದಾಳಿಗಳು ನಡೆದಿವೆ. ಸುಮಾರು 500ಕ್ಕೂ ರೈತರು ಪ್ರತಿಭಟನಾ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments