Webdunia - Bharat's app for daily news and videos

Install App

ಗಾಂಧಿ ಕುಟುಂಬದ ಋಣ ತೀರಿಸುವ ಸಮಯ ಬಂದಿದೆ ಮಾಜಿ ಸ್ಪೀಕರ್ ರಮೇಶ್ ಕುಮಾರ್

Webdunia
ಗುರುವಾರ, 21 ಜುಲೈ 2022 (17:10 IST)
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ವಿಚಾರಣೆ ವಿರೋಧಿಸಿದ ಕೆಪಿಸಿಸಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ಮಾತನಾಡಿ ' ಗಾಂಧಿ ಕುಟುಂಬ ಹೆಸರಲ್ಲಿ 3-4 ತಲೆಮಾರುಗಳಿಗೆ ಆಗುವಷ್ಟು ಹಣ, ಆಸ್ತಿ ಮಾಡಿಕೊಂಡ ನಾವು ಈಗ ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ' ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಕಾಂಗ್ರೆಸ್‌ ಸುಮಾರು 70 ವರ್ಷ ದೇಶ ಆಳಿದೆ. ಕಾಂಗ್ರೆಸ್‌ನವರೇ ಆದ ನಾವೆಲ್ಲರೂ ಮುಂದಿನ ಮೂರ್ನಾಲ್ಕು ತಲೆಮಾರುಗಳಿಗೆ ಆಗುವಷ್ಟು ಆಸ್ತಿ, ಹಣ ಗಳಿಸಿದ್ದೇವೆ. ಅಧಿಕಾರ ಅನುಭವಿಸಿದ್ದೇವೆ. ಇದೀಗ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರತ್ರಿಕೆ ಖರೀದಿ ಅವ್ಯವಹಾರ ಮತ್ತು ಹಣ ವರ್ಗಾವಣೆ ಆರೋಪ ಮೇಲೆ ವಿಚಾರಣೆ ನಡೆಯುತ್ತಿದೆ. ದೇಶ ಉಳಿಯಲು, ಕಾಂಗ್ರೆಸ್‌ ಉಳಿಸಲು ನಾವೆಲ್ಲರೂ ಒಟ್ಟಾಗಿ ಸೋನಿಯಾ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡಬೇಕು' ಎಂದು ಮನವಿ ಮಾಡಿದರು.
 
'ಗಾಂಧಿ ಕುಟುಂಬದ ಋಣ ತೀರಿಸದೇ ಹೋದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ. ಪಕ್ಷ ಕುಟುಂಬ ಇದ್ದಂತೆ, ಕುಟುಂಬ ಎಂದ ಮೇಲೆ ಸಣ್ಣ ಪುಟ್ಟ ಮನಸ್ತಾಪಗಳೆಲ್ಲವು ಸಹಜ. ಅವೆಲ್ಲವುಗಳನ್ನು ಬದಿಗೊತ್ತಿ ನಾವೆಲ್ಲರು ಒಂದಾಗಬೇಕು. ಸಂಕಷ್ಟದಲ್ಲಿರುವ ಸೋನಿಯಾ ಅವರೊಂದಿಗೆ ನಿಲ್ಲಬೇಕು. ಆಗ ಮಾತ್ರ ನಾವು ತಿನ್ನುವ ಎರಡು ಹೊತ್ತಿನ ಊಟಕ್ಕೆ ಸಾರ್ಥಕ ಬರುತ್ತದೆ' ಎಂದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments