Webdunia - Bharat's app for daily news and videos

Install App

ಹಠಕ್ಕೆ ಬಿದ್ದು ನರಹಂತಕ ಟಿಪ್ಪು ಜಯಂತಿಗೆ ಸಿಎಂ ಮುಂದಾಗಿದ್ದಾರೆ: ಜೋಶಿ

Webdunia
ಗುರುವಾರ, 3 ನವೆಂಬರ್ 2016 (14:03 IST)
ಹುಬ್ಬಳ್ಳಿ: ಕ್ರಿಶ್ಚಿಯನ್, ಹಿಂದು ಹಾಗೂ ಕೊಡವರನ್ನು ನರಸಂಹಾರ ಮಾಡಿದ ನರ ಹಂತಕ ಟಿಪ್ಪುವಿನ ಜಯಂತಿಯನ್ನು ಸರಕಾರ ಹಠಕ್ಕೆ ಬಿದ್ದು ಚರಣೆ ಮಾಡಲು ಹೊರಟಿರುವುದು ಯಾವ ಪುರುಷಾರ್ಥಕ್ಕೆ ಎಂದು ಸಂಸದ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿ ಆಚರಣೆಯಿಂದ ಸರಕಾರಕ್ಕೇನು ಪ್ರಯೋಜನವಿದೆ ಎಂದು ಉಚ್ಚ ನ್ಯಾಯಾಲಯ ಪ್ರಶ್ನಿಸಿದೆ. ಅಲ್ಲದೆ, ಟಿಪ್ಪು ಎಲ್ಲರಂತೆ ಒಬ್ಬ ಸುಲ್ತಾನನಾಗಿದ್ದು, ತನ್ನ ರಾಜ್ಯವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ಬ್ರಿಟಿಷರ ಜತೆ ಹೋರಾಡಿದ್ದಾನೆ. ರಾಜ್ಯದಲ್ಲಿ ಸಾಕಷ್ಟು ವಿರೋಧವಿದ್ದಾಗ ವೃಥಾ ತಲೆನೋವು ಯಾಕೆ ತಂದುಕೊಳ್ಳುತ್ತೀರಿ ಎಂದು ನ್ಯಾಯಾಲಯ ಹೇಳುವ ಮೂಲಕ ತನ್ನ ಸ್ಪಷ್ಟ ಅಭಿಪ್ರಾಯ ತಿಳಿಸಿದೆ. ನಾಡಿನ ಅನೇಕ ಪ್ರಮುಖರು ಸಹ ಟಿಪ್ಪು ಜಯಂತಿಯನ್ನು ಬಲವಾಗಿ ವಿರೋಧಿಸುತ್ತಿದ್ದಾರೆ ಎಂದರು.
 
ನ್ಯಾಯಾಲಯದ ಸಲಹೆ, ಪ್ರಮುಖರ ವಿರೋಧವಿದ್ದಾಗಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಠಕ್ಕೆ ಬಿದ್ದು ಟಿಪ್ಪು ಜಯಂತಿಯನ್ನು ಆಚರಿಸಿಯೇ ಸಿದ್ಧ ಎನ್ನುತ್ತಿದ್ದಾರೆ. ಟಿಪ್ಪು ಸುಲ್ತಾನನೊಬ್ಬ ಮತಾಂಧನಾಗಿದ್ದು ಹಿಂದು, ಕ್ರಿಶ್ಚಿಯನ್ ಹಾಗೂ ಕೊಡವರನ್ನು ಸಂಹಾರ ಮಾಡಿದ ನರಹಂತಕ. ನ್ಯಾಯಾಲಯದ ಸಲಹೆ ಕೇಳಿಯಾದರೂ ಸಿದ್ದರಾಮಯ್ಯ ಪಾಠ ಕಲೆಯುತ್ತಾರೆ ಎಂದು ಭಾವಿಸಿದ್ದೇವೆ. ಈ ಕುರಿತು ಬಿಜೆಪಿಯ ಹೋರಾಟವಂತೂ ನಿರಂತರವಾಗಿರುತ್ತದೆ ಎಂದು ಸಂಸದ ಜೋಶಿ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments