Select Your Language

Notifications

webdunia
webdunia
webdunia
webdunia

ಟಿಪ್ಪು ಜಯಂತಿಗೆ ಬಿಗಿ ಭದ್ರತೆ

ಟಿಪ್ಪು ಜಯಂತಿ
ಬೆಂಗಳೂರು , ಬುಧವಾರ, 9 ನವೆಂಬರ್ 2016 (08:40 IST)
ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ರಾಜ್ಯಸರ್ಕಾರ ಸಜ್ಜಾಗಿದ್ದು ರಾಜ್ಯಾದ್ಯಂತ ಕಟ್ಟುನಿಟ್ಟಿನ ಭದ್ರತೆಗೆ ನಿರ್ದೇಶಿಸಲಾಗಿದೆ.
 
ಜಯಂತಿ ಆಚರಣೆಗೆ ವಿರೋಧಿಸಿ ಬಿಜೆಪಿ ಮಂಗಳವಾರ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದ್ದು, ಹಿಂದೂ ಸಂಘಟನೆಗಳ ಕಡೆಯಿಂದ ವ್ಯಾಪಕ ವಿರೋಧ ಪ್ರದರ್ಶನ ಮುಂದುವರೆದಿದೆ.
 
ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸುವ್ಯವಸ್ಥೆಗೆ ಭಂಗ ತಂದಲ್ಲಿ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
 
ನಿನ್ನೆ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 24ಗಂಟೆಯೊಳಗೆ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುತ್ತೇವೆ ಎಂದು ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

500, 1000 ನೋಟು ಬದಲಿಸಲು 50 ದಿನವಷ್ಟೇ ಕಾಲಾವಕಾಶ