Webdunia - Bharat's app for daily news and videos

Install App

ಅಂದು ಟಿಪ್ಪು ವೇಷಧರಿಸಿ ಇಂದು ವಿರೋಧಿಸುತ್ತಿರುವುದೇಕೆ: ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 24 ಅಕ್ಟೋಬರ್ 2017 (16:07 IST)
ಬೆಂಗಳೂರು:  ರಾಜ್ಯದಲ್ಲಿ ಟಿಪಪ್ಉ ಜಯಂತಿ ಆಚರಣೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ವಿಚಾರ ಗದ್ದಲ ಎಬ್ಬಿಸುತ್ತಿದೆ. ಟಿಪ್ಪು ಜಯಂತಿ ವಿರೋಧಿಸುತ್ತಿರುವ ಬಿಜೆಪಿ ನಾಯಕರಾದ ಯಡಿಯೂರಪ್ಪ, ಜಗದೀಶ್‌ ಶೆಟ್ಟರ್, ಅಶೋಕ್ ಮೊದಲಾದವರು ಈ ಹಿಂದೆ ಟಿಪ್ಪು ವೇಷಧಾರಿಗಳಾಗಿ ಜಯಂತಿ ಆಚರಣೆ ಮಾಡಿದ್ದು ಏನೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ ಎಂಬ ಕಾರಣಕ್ಕೆ ಟಿಪ್ಪು ಜಯಂತಿ ವಿರೋಧ ಮಾಡುತ್ತಿರುವ ಬಿಜೆಪಿಯವರದ್ದು ಎರಡು ನಾಲಿಗೆ ಅಲ್ಲವೇ? ಜನ ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇ ಎಂದರು.

ಯಡಿಯೂರಪ್ಪ ಈ ಹಿಂದೆ ಟಿಪ್ಪು ವೇಷಧಾರಿಯಾಗಿ ಖಡ್ಗ ಹಿಡಿದು ಅಲ್ಲಾಹನ ಮೇಲಾಣೆ  ನಾನು ಮತ್ತೆ ಬಿಜೆಪಿ ಸೇರುವುದಿಲ್ಲ ಎಂದು ಕೂಗಿದ್ದೇ ಕೂಗಿದ್ದು. ಇಂತಹ ರಾಜಕೀಯ ಇಬ್ಬಂದಿತನ ಜನರಿಗೂ ಗೊತ್ತಾಗುತ್ತದೆ. ಆಗೊಂದು, ಈಗೊಂದು ನಾಟಕವಾಡುವ ಯಡಿಯೂರಪ್ಪ ಅವರ ಮಾತಿಗೆ ಏನಾದರೂ ಕಿಮ್ಮತ್ತು ಇದೆಯೇ ಎಂದರು.

ಸಿಎಂ ಆಗಿ ಜಗದೀಶ್ ಶೆಟ್ಟರ್, ಉಪ ಮುಖ್ಯಮಂತ್ರಿಯಾಗಿ ಅಶೋಕ್ ಟಿಪ್ಪು ವೇಷಧಾರಿಗಳಾಗಿಯೇ ಜಯಂತಿ ಆಚರಿಸಿದ್ದರು. ಟಿಪ್ಪು ಕುರಿತಾದ ಪುಸ್ತಕಕ್ಕೆ ಮುನ್ನುಡಿ ಬರೆದು ಶೆಟ್ಟರ್ ಅವರು ಟಿಪ್ಪುವನ್ನು ಹಾಡಿಹೊಗಳಿದ್ದಾರೆ. ಅವರೆಲ್ಲ ಈಗ ವಿರೋಧ ಮಾಡುತ್ತಿರುವುದು ರಾಜಕೀಯ ಪ್ರೇರಿತ ಅಷ್ಟೇ ಎಂದರು. ರಾಜಕೀಯ ಕಾರಣಕ್ಕಾಗಿ ಟಿಪ್ಪು ಜಯಂತಿ ವಿರೋಧ ಮಾಡುತ್ತಿರುವ ಬಿಜೆಪಿ ನಾಯಕರು ಹಿಂದೂ ಮುಸ್ಲಿಂರ ನಡುವೆ ಬೆಂಕಿ ಹಚ್ವುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments