ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ: ಆದ್ರೆ ಬಿಜೆಪಿ ಶಾಸಕನಿಂದಲೇ ಟಿಪ್ಪು ಜಯಂತಿ ಆಚರಣೆ

Webdunia
ಶುಕ್ರವಾರ, 10 ನವೆಂಬರ್ 2017 (13:26 IST)
ಟಿಪ್ಪು ಸುಲ್ತಾನ್ ಕೊಲೆಗಡುಕ, ದೇಶದ್ರೋಹಿ, ಹಿಂದು ವಿರೋಧಿ ಎಂದು ಬಿಜೆಪಿ ಕಟುವಾಗಿ ವಿರೋಧಿಸುತ್ತಿರುವ ಮಧ್ಯೆಯೇ, ಬಿಜೆಪಿ ಶಾಸಕ ಆನಂದ್ ಸಿಂಗ್ ಟಿಪ್ಪು ಜಯಂತಿ ಆಚರಣೆಯಲ್ಲಿ ಭಾಗಿಯಾಗಿ ಬಿಜೆಪಿ ವರಿಷ್ಠರ ಕೆಂಗೆಣ್ಣಿಗೆ ಗುರಿಯಾಗಿದ್ದಾರೆ.
ಬಿಜೆಪಿಯ ಇತರ ಮುಖಂಡರೊಂದಿಗೆ ಸಭೆಯಲ್ಲಿ ಪಾಲ್ಗೊಂಡು ಬಿಜೆಪಿ ಕಚೇರಿಯ ಮುಂದೆಯೇ ಟಿಪ್ಪು ಜಯಂತಿ ಆಚರಿಸಿದ ಆನಂದ್ ಸಿಂಗ್, ಬಿಜೆಪಿ ವರಿಷ್ಠರ ವಿರೋಧ ಕಟ್ಟಿಕೊಂಡಂತಾಗಿದೆ.
 
ಬಳ್ಳಾರಿಯ ಹೊಸಪೇಟೆಯಲ್ಲಿ ಮುಸ್ಲಿಂ ಸಮುದಾಯ ಸಂಖ್ಯೆ ಅಧಿಕವಾಗಿರುವುದರಿಂದ ಟಿಪ್ಪು ಜಯಂತಿ ಆಚರಿಸದಿದ್ದರೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಿರುಗೇಟು ಬೀಳುವ ಸಾಧ್ಯತೆಗಳಿವೆ ಎನ್ನುವ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿ ಆಚರಿಸಿದ್ದಾರೆ ಎನ್ನಲಾಗುತ್ತಿದೆ.
 
ಮತ್ತೊಂದೆಡೆ ಹೊಸಪೇಟೆಯಲ್ಲಿ ಸರ್ಕಾರದಿಂದ ಆಚರಿಸುತ್ತಿರುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಆನಂದ ಸಿಂಗ್‌ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ. ಇದು ಟಿಪ್ಪು ಜಯಂತಿ ವಿರೋಧಿಸುತ್ತಿರುವ ಬಿಜೆಪಿ ಮುಖಂಡರಿಗೆ ಮುಜುಗರ ಉಂಟುಮಾಡಿದೆ ಎನ್ನಲಾಗ್ತಿದೆ. 
 
ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಿ.ಟಿ,ರವಿ. ಕೆ.ಎಸ್.ಈಶ್ವರಪ್ಪ ಸೇರಿದಂತೆ ಘಟಾನುಘಟಿ ಮುಖಂಡರು ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿರುದ್ಧ ಒಂದೆಡೆ ವಾಗ್ದಾಳಿ ನಡೆಸುತ್ತಿದ್ದರೆ, ಮತ್ತೊಂದೆಡೆ ಬಿಜಿಪೆ ಶಾಸಕನೇ ಟಿಪ್ಪು ಜಯಂತಿ ಆಚರಿಸುತ್ತಿರುವುದು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿದೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಚುನಾವಣೆ ವೇಳೆಯೇ ಬಾಂಬ್ ಸ್ಪೋಟ: ಇದಕ್ಕೆ ಕೇಂದ್ರವೇ ಉತ್ತರ ಕೊಡಬೇಕು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments