Webdunia - Bharat's app for daily news and videos

Install App

ಟಿಪ್ಪು ಜಯಂತಿ ಆಚರಣೆ ಹಿನ್ನಲೆ; ಕೊಡಗು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ

Webdunia
ಶುಕ್ರವಾರ, 9 ನವೆಂಬರ್ 2018 (07:09 IST)
ಕೊಡಗು : ವಿರೋಧದ ನಡುವೆಯು ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿರುವ ಕಾರಣ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಶನಿವಾರ ಕೊಡಗು ಬಂದ್ ನೀಡಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಾಜ್ಞೆ ಜಾರಿಯಾಗಲಿದೆ.


ಈ ಹಿಂದೆ ವಿರೋಧವಿದ್ದರು ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಿಸಿದ್ದರಿಂದ  ಮಡಿಕೇರಿಯಲ್ಲಿ ಘರ್ಷಣೆ ನಡೆದಿದ್ದು, ಆ ವೇಳೆ ವ್ಯಕ್ತಿಯೊಬ್ಬರು ಸಾವನಪ್ಪಿದ್ದರು. ಆದಕಾರಣ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಾಜ್ಞೆ ಜಾರಿಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಡಾ.ಸುಮನಾ ಡಿ ಪನ್ನೇಕರ್ ತಿಳಿಸಿದ್ದಾರೆ.


ಕುರಿತು ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಡಾ.ಸುಮನಾ ಡಿ ಪನ್ನೇಕರ್, ಕೊಡಗು ಜಿಲ್ಲೆಯ ಸೋಮವಾರಪೇಟೆ, ಮಡಿಕೇರಿ ಹಾಗೂ ವಿರಾಜಪೇಟೆಗಳಲ್ಲಿ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಹೊರ ಜಿಲ್ಲೆಯಿಂದ ಕಿಡಿಗೇಡಿಗಳು ಬಾರದಂತೆ 10 ಚೆಕ್‍ಪೋಸ್ಟ್‍ಗಳನ್ನು ತೆರೆಯಲಾಗಿದೆ ಎಂದು ಹೇಳಿದ್ದಾರೆ.
ಹಾಗೇ ಈಗಾಗಲೇ ಬಂದ್‍ಗೆ ಕರೆ ಕೊಟ್ಟಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಬಲವಂತವಾಗಿ ಬಂದ್ ಮಾಡಿಸಿದರೆ, ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments