Publish Date: Thu, 14 Dec 2017 (09:33 IST)
Updated Date: Thu, 14 Dec 2017 (09:41 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪು ಸುಲ್ತಾನ್ ಪುನರ್ಜನ್ಮದಂತೆ ವರ್ತಿಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂಗಳ ರಕ್ಷಣೆ ಮಾಡುತ್ತಿಲ್ಲ, ಬದಲಿಗೆ ಹಿಂದುಗಳ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.
ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಗೃಹ ಸಚಿವರು ಲಘುವಾಗಿ ಪರಿಗಣಿಸಿದ್ದು ಬೇಜವಾಬ್ದಾರಿತನದ ಪರಮಾವಧಿ. ಮೀನುಗಾರರ ಆಕ್ರೋಶಕ್ಕೆ ಗುರಿಯಾಗಿರುವ ಸರ್ಕಾರ ಬಿಜೆಪಿಯನ್ನು ದೂರುವುದು ಸರಿಯಲ್ಲ. ಇದು ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.
ಪರೇಶ್ ಮೇಸ್ತನ ಶವದ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ನಾಪತ್ತೆಯಾಗಿದ್ದಾರೆ. ಅವರ ಫೋನ್ ಕೂಡ ಸ್ಪಿಚ್ ಆಫ್ ಆಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.