Webdunia - Bharat's app for daily news and videos

Install App

ಮೈಸೂರು ಹುಲಿ ಬಿರುದು ಮಾಯ: ಟಿಪ್ಪು ಸುಲ್ತಾನ್‌ ಪಠ್ಯಕ್ಕೆ ಕತ್ತರಿ

Webdunia
ಮಂಗಳವಾರ, 17 ಮೇ 2022 (14:44 IST)
ಭಾರೀ ವಿವಾದ ಕೆರಳಿಸಿದ್ದ ಟಿಪ್ಪು ಸುಲ್ತಾನ್‌ ಪಠ್ಯದಲ್ಲಿ ನಿರೀಕ್ಷೆಯಂತೆ ರಾಜ್ಯ ಶಿಕ್ಷಣ ಇಲಾಖೆ ಕತ್ತರಿ ಆಡಿಸಿದ್ದು, ಕೇವಲ 2 ಸಾಲಿನಲ್ಲಿ ಪಾಠ ಮುಗಿಸಿದೆ.
ಸೋಮವಾರದಿಂದ ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, 10ನೇ ತರಗತಿಯ ಸಮಾಜ ವಿಜ್ಞಾನ ಪಾಠದಲ್ಲಿ ಟಿಪ್ಪುಸುಲ್ತಾನ್‌ ಪಠ್ಯಕ್ಕೆ ರಾಜ್ಯ ಸರಕಾರ ಕತ್ತರಿ ಹಾಕಿದ್ದು, ಹಲವು ಮಹತ್ವದ ವಿಷಯಗಳನ್ನು ತೆಗೆದು ಹಾಕಿದೆ.
ಟಿಪ್ಪು ಸುಲ್ತಾನ್‌ ಅವರಿಗೆ ಮೈಸೂರು ಹುಲಿ ಎಂಬ ಬಿರುದು ಇದ್ದು, ಅದನ್ನು ಪಠ್ಯದಿಂದ ತೆಗೆದು ಹಾಕಲಾಗಿದೆ. ಟಿಪ್ಪು ಸುಲ್ತಾನ್‌ ಹೋರಾಟ ಹಾಗೂ ಮೈಸೂರು ಆಳ್ವಿಕೆಯ ವರದಿ ತೆಗೆದು ಹಾಕಲಾಗಿದೆ. ಅಲ್ಲದೇ ಮೈಸೂರು ಒಡೆಯ ಎಂಬ ಶಬ್ಧವನ್ನು ಕಿತ್ತು ಹಾಕಲಾಗಿದೆ.
ಟಿಪ್ಪು ಸುಲ್ತಾನ್‌ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದು ಮರೆ ಮಾಚಲಾಗಿದ್ದು, ಪಠ್ಯದಲ್ಲಿ ಬಹುವಚನ ಬದಲು ಏಕವಚನ ಪ್ರಯೋಗ ಮಾಡಲಾಗಿದೆ. ಈ ಮೂಲಕ ಟಿಪ್ಪು ವ್ಯಕ್ತಿತ್ವವನ್ನು ಮಂಕು ಮಾಡುವ ಪ್ರಯತ್ನ ನಡೆದಿದ್ದು, ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments