Webdunia - Bharat's app for daily news and videos

Install App

ಟಿಪ್ಪು ಸರ್ಕಲ್ ವಿವಾದ : ಸಂಘಟನೆಗಳಿಗೆ ವಾರ್ನಿಂಗ್, 144 ಸೆಕ್ಷನ್ ಜಾರಿ

Webdunia
ಸೋಮವಾರ, 27 ಫೆಬ್ರವರಿ 2023 (08:25 IST)
ಯಾದಗಿರಿ : ನಗರದ ಹತ್ತಿಕುಣಿ ಸರ್ಕಲ್ ಬಳಿ ಇರುವ ವಿವಾದಿತ ಟಿಪ್ಪು ಸರ್ಕಲ್ ವಿವಾದ ತೀವ್ರ ಜಟಾಪಟಿಗೆ ಕಾರಣವಾಗಿದ್ದು, ಎರಡು ಕೋಮುಗಳ ನಡುವಿನ ಸಾಮರಸ್ಯಕ್ಕೆ ಕೊಳ್ಳಿ ಇಟ್ಟಿದೆ.
 
ಇಂದು ಶಿವಾಜಿ ಸಂಘಟನೆಯಿಂದ ಸರ್ಕಲ್ ತೆರವುಗೊಳಿಸೋದಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಸಂಘರ್ಷದ ಮುನ್ಸೂಚನೆ ಅರಿತ ಪೊಲೀಸರು ತೀವ್ರ ನಿಗಾವಹಿಸಿದ್ದು, 144 ಸೆಕ್ಷನ್ ಜಾರಿಗೊಳಿಸಿದ್ದಾರೆ.

ಇಷ್ಟು ದಿನಗಳ ಕಾಲ ಶಾಂತವಾಗಿದ್ದ ಯಾದಗಿರಿ ನಗರದಲ್ಲೀಗ ಟಿಪ್ಪು ಸರ್ಕಲ್ ವಿವಾದ ಶುರುವಾಗಿದ್ದು, ಎರಡು ಕೋಮುಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.

ನಗರದ ಹತ್ತಿಕುಣಿ ರಸ್ತೆ ಬಳಿ 2010ರಲ್ಲಿ ನಿರ್ಮಾಣವಾಗಿರುವ ಟಿಪ್ಪು ಸರ್ಕಲ್ ಅನಧಿಕೃತವಾಗಿದೆ ಅಂತಾ ಜೈ ಶಿವಾಜಿ ಸಂಘಟನೆ ಆರೋಪಿಸಿದೆ. ಅನಧಿಕೃತವಾಗಿ ನಿರ್ಮಾಣ ಮಾಡಿರೋ ವೃತ್ತದಲ್ಲಿ ಹಾಕಿರುವ ನಾಮಫಲಕವನ್ನ ತೆರವುಗೊಳಿಸಬೇಕು ಅಂತಾ ಒತ್ತಾಯಿಸಿ, ಗಡುವನ್ನೂ ನೀಡಲಾಗಿತ್ತು.

ಆ ಗಡುವು ಮುಕ್ತಾಯವಾಗಿದ್ದು, ಪ್ರತಿಭಟನಾ ಮೆರವಣಿಗೆ ಟಿಪ್ಪು ಸರ್ಕಲ್ ಗೆ ಬಂದು ನಾವೇ ನಾಮಫಲಕ ಕಿತ್ತೊಗಿತೀವಿ ಅಂತಾ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಸವಾಲು ಹಾಕಿದ್ದಾರೆ. ಹೀಗಾಗಿ ಟಿಪ್ಪು ಸರ್ಕಲ್ ಬಳಿ ಇರೋ ಏರಿಯಾದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments