Webdunia - Bharat's app for daily news and videos

Install App

ಲೈಂಗಿಕ ಸುಖ: ಪತಿಯ ದಾಹದಿಂದ ಬೇಸತ್ತು ಇಂತಹ ಕೃತ್ಯ ಎಸಗಿದ ಪತ್ನಿ

Webdunia
ಗುರುವಾರ, 2 ನವೆಂಬರ್ 2023 (18:15 IST)
ಪೊಲೀಸ್ ಮೂಲಗಳ ಪ್ರಕಾರ, ಪದೇ ಪದೇ ಲೈಂಗಿಕ ಸುಖಕ್ಕಾಗಿ ಪೀಡಿಸುತ್ತಿರುವದರಿಂದ ಬೇಸತ್ತು ಅನಿಲ್ ಕಚೇರಿಗೆ ತೆಗೆದುಕೊಂಡು ಹೋಗುವ ಟಿಫಿನ್‌ ಬಾಕ್ಸ್‌ನಲ್ಲಿ ಕೀಟನಾಶಕ ಬೆರೆಸಿದ್ದಳು. ಆದರೆ,ಹೊಟ್ಟೆನೋವಿನಿಂದಾಗಿ ಆತ ಟಿಫಿನ್‌ ಬಾಕ್ಸ್‌ನಲ್ಲಿರುವ ಆಹಾರವನ್ನು ರಸ್ತೆಯಲ್ಲಿ ಬಿಸಾಕಿ ಹೋಗಿದ್ದ. ಸಾಯಂಕಾಲ ಮನೆಗೆ ಬಂದೊಡನೆ ಟೀ ಕೊಡುವಂತೆ ಕೇಳಿದ ಪತಿಗೆ ಮತ್ತೆ ಚಹಾದಲ್ಲಿ ಕೀಟನಾಶಕ ಬೆರಸಿ ನೀಡಿದ್ದಾಳೆ.
 
ಚಹಾ ಕುಡಿದ ನಂತರ ಅನಿಲ್ ಆರೋಗ್ಯದಲ್ಲಿ ಏರುಪೇರಾಗಿ ಹತ್ತಿರದಲ್ಲಿರುವ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರೋಗ್ಯ ಮತ್ತಷ್ಟು ಹದಗೆಟ್ಟಿದ್ದರಿಂದ ತುರ್ತುನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದೆ.
 
ಲೈಂಗಿಕ ಸುಖಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದ ಪತಿಯ ವರ್ತನೆಯಿಂದ ಬೇಸರಗೊಂಡ ಪತ್ನಿಯೊಬ್ಬಳು ಪತಿಯ ಚಹಾದಲ್ಲಿ ಕೀಟನಾಶಕ ಬೆರೆಸಿ ಹತ್ಯೆಗೆ ಪ್ರಯತ್ನಿಸಿದ ವಿಚಿತ್ರ ಘಟನೆ ವರದಿಯಾಗಿದೆ.
 
ಪತ್ನಿಯ ಕೃತ್ಯದಿಂದಾಗಿ ಪತಿಯ ದೇಹಸ್ಥಿತಿ ವಿಷಮ ಸ್ಥಿತಿಯಲ್ಲಿದ್ದು, ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾನೆ, ವಿರಾರ್ ಪೊಲೀಸ್ ಠಾಣೆಯ ಪೊಲೀಸರು ಹತ್ಯೆಗೈಯಲು ಪ್ರಯತ್ನಿಸಿದ ಆತನ ಪತ್ನಿಯನ್ನು ಬಂಧಿಸಿದ್ದಾರೆ.
 
ಮುಂಬೈ ನಗರದ ವಿರಾರ್( ಪಶ್ಚಿಮ) ಶಿರ್ಗಾಂವ್ ನಿವಾಸಿಯಾಗಿರುವ ಅನಿಲ್ ಯಶ್ವಂತ್ ಪಾಟೀಲ್ ಖಾಸಗಿ ಕಂಪೆನಿಯಲ್ಲಿ ಎಲೆಕ್ಟ್ರಿಸಿಯನ್ ವೃತ್ತಿಯಲ್ಲಿದ್ದ. ಕಳೆದ ಮೂರು ತಿಂಗಳ ಹಿಂದೆ 21 ವರ್ಷ ವಯಸ್ಸಿನ ಆಶಾ ಎನ್ನುವ ಯುವತಿಯನ್ನು ವಿವಾಹವಾಗಿದ್ದ.
 
ಮನೆಯಲ್ಲಿರುವ ಕುಟುಂಬದ ಸದಸ್ಯರು ಆಶಾ ಬಳಿ ಕೀಟನಾಶಕ ಪತ್ತೆಯಾಗಿದ್ದರಿಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಶಾಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
 
ಪೊಲೀಸ್ ಅಧಿಕಾರಿ ವೈ.ಕೆ.ಚೌರೆ ಮಾತನಾಡಿ, ಪತಿಯ ಸೆಕ್ಸ್ ದಾಹದಿಂದ ಬೇಸತ್ತು ಇಂತಹ ಕೃತ್ಯ ಎಸಗಿದ್ದಾಗಿ ಆಕೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ