Webdunia - Bharat's app for daily news and videos

Install App

ತಿವಾರಿ ಪ್ರಕರಣ: ಕೇಂದ್ರದ ತನಿಖೆಗೆ ಸಹಕರಿಸಲು ಸಿದ್ದ ಎಂದ ಸಿಎಂ

Webdunia
ಶುಕ್ರವಾರ, 19 ಮೇ 2017 (13:19 IST)
ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಬಗ್ಗೆ ಕೇಂದ್ರ ಸರಕಾರ ನಡೆಸುವ ಯಾವುದೇ ರೀತಿಯ ತನಿಖೆಗೆ ಸಹಕರಿಸಲು ಸರಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಲಕ್ನೋದಲ್ಲಿ ಅನುರಾಗ್ ತಿವಾರಿ ಅನುಮನಾಸ್ಪದವಾಗಿ ಸಾವನ್ನಪ್ಪಿದ್ದಾರೆ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಗರಣ ಆಗಿದೆ ಎಂದು ಯಾರೋ ಹೇಳಿದ್ದನ್ನು ನಂಬಲು ಸಾಧ್ಯವಿಲ್ಲ. ಆ ಹಗರಣ ಯಾವುದೆಂದು ಕೂಡಾ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.
 
ಕೇಂದ್ರ ಸರಕಾರಕ್ಕೆ ಒಂದು ವೇಳೆ ತಿವಾರಿ ಸಾವಿನ ಬಗ್ಗೆ ಅನುಮಾನವಿದ್ದಲ್ಲಿ ಯಾವುದೇ ಏಜೆನ್ಸಿಯೊಂದಿಗೆ ತನಿಖೆ ನಡೆಸಲಿ. ರಾಜ್ಯ ಸರಕಾರ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
 
ಆಹಾರ ಸರಬರಾಜು ಇಲಾಖೆಯಲ್ಲಿ 200 ಕೋಟಿ ರೂಪಾಯಿ ಹಗರಣ ನಡೆದಿದ್ದು, ಹಗರಣವನ್ನು ಬಯಲಿಗೆಳೆಯುವಲ್ಲಿ ನಿರತರಾಗಿದ್ದ ಅನುರಾಗ್ ತಿವಾರಿಯವರಿಗೆ ಹಿರಿಯ ಅಧಿಕಾರಿಗಳು ಸಾಥ್ ನೀಡಿರಲಿಲ್ಲ. ಕಿರುಕುಳ ನೀಡುತ್ತಿದ್ದರು. ಅವರ ಸಾವಿನ ಹಗರಣದ ಹಿಂದಿರುವವರ ಕೈವಾಡವಿದೆ ಎನ್ನುವ ವರದಿಗಳು ಹರಡಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments