Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಬಳಿಕ ಆಪ್ತ ಜಮೀರ್ ಅಹ್ಮದ್ ಗೂ ಬಲೆ ಹೆಣೆದ ಟಿಜೆ ಅಬ್ರಹಾಂ

Krishnaveni K
ಶನಿವಾರ, 28 ಸೆಪ್ಟಂಬರ್ 2024 (15:32 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಮಾಡಿದ್ದಾರೆಂದು ರಾಜ್ಯಪಾಲರಿಗೆ ಖಾಸಗಿ ದೂರು ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಈಗ ಸಿದ್ದು ಆಪ್ತ ಜಮೀರ್ ಅಹ್ಮದ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್ ತನಿಖೆಗೆ ಆದೇಶ ನೀಡಿದಾಗ ಪ್ರತಿಕ್ರಿಯಿಸಿದ್ದು ಜಮೀರ್ ಅಹ್ಮದ್, ಇದು ರಾಜಕೀಯ ಪ್ರೇರಿತ ತೀರ್ಪು ಎಂದದಿದ್ದರು. ‘100 ಕ್ಕೆ ನೂರು ಇದು ರಾಜಕೀಯ ಪ್ರೇರಿತ ತೀರ್ಪು. ಎಲ್ಲವನ್ನೂ ನಾನು ಇಲ್ಲಿ ಬಿಡಿಸಿ ಹೇಳೋ ಹಾಗಿಲ್ಲ’ ಎಂದಿದ್ದರು. ನ್ಯಾಯಾಲಯ ತೀರ್ಪನ್ನೇ ರಾಜಕೀಯ ಎಂದಿದ್ದ ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಎದುರಾಗಿತ್ತು.

ಇದರ ಬೆನ್ನಲ್ಲೇ ಅವರು ಮಾಧ್ಯಮಗಳ ಮೂಲಕ ಕ್ಷಮೆ ಕೇಳಿದ್ದರು. ನ್ಯಾಯಾಂಗದ ಬಗ್ಗೆ ನನಗೂ ಗೌರವವಿದೆ. ಖಂಡಿತಾ ನ್ಯಾಯಾಲಯದ ತೀರ್ಪು ಪ್ರಶ್ನಿಸುವ ಹಾಗಿಲ್ಲ. ತಪ್ಪಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದಿದ್ದರು. ಆದರೆ ಇಷ್ಟಕ್ಕೇ ಅವರಿಗೆ ಕಂಟಕ ತಪ್ಪಿಲ್ಲ.

ಕೋರ್ಟ್ ಆದೇಶವನ್ನೇ ರಾಜಕೀಯ ಎಂದಿರುವ ಜಮೀರ್ ಅಹ್ಮದ್ ವಿರುದ್ಧ ಅಬ್ರಹಾಂ ಕೋರ್ಟ್ ಗೆ ದೂರು ನೀಡಿದ್ದಾರೆ. ಇದು ರಾಜಕೀಯ ಪ್ರೇರಿತ ತೀರ್ಪು ಹೇಗಾಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ. ಹೀಗಾಗಿ ಈಗ ಹೇಳಿಕೆ ಕೊಡಲು ಹೋಗಿ ಎಡವಟ್ಟು ಮಾಡಿದ್ದ ಜಮೀರ್ ಗೆ ಸಂಕಷ್ಟ ಎದುರಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments