ಟಿಎಂಸಿ ನಾಯಕ ಶೇಖ್ ಶಾಜಹಾನ್ ಬಂಧನ ...!

geetha
ಶುಕ್ರವಾರ, 5 ಜನವರಿ 2024 (16:35 IST)
ಸಂದೇಶ್‌ ಖಲಿಯಲ್ಲಿ ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಶೇಖ್‌ ಶಾಜಹಾನ್‌ ನನ್ನು ಬಂಧಿಸಲು ತೆರಳಿದ್ದ ವೇಳೆ ಇಡಿ ಅಧಿಕಾರಿಗಳ ಮೇಲೆ 200 ಜನರ ಗುಂಪೊಂದು ಶುಕ್ರವಾರ ಭೀಕರ ದಾಳಿ ನಡೆಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಟಿಎಂಸಿ ನಾಯಕ ಕುನಾಲ್‌ ಘೋಷ್‌ ಪ್ರತಿಕ್ರಿಯೆ ನೀಡಿದ್ದು, ಇಡಿ ಅಧಿಕಾರಗಳ ಮೇಲೆ ನಡೆದ ದಾಳಿಯನ್ನು ಸಮರ್ಥಿಸಿಕೊಂಡಿದ್ದಾರೆ. 
 
ಕೇಂದ್ರ ತನಿಖಾ ತಂಡಗಳು ಬಿಜೆಪಿಯಿಂದ ನಿರ್ದೇಶನ ಪಡೆದು ಟಿಎಂಸಿ ನಾಯಕರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದೆ. ನಾವು ನಿರಂತರವಾಗಿ ಇಲ್ಲ ಸಲ್ಲದ ಆರೋಪಗಳನ್ನು ಎದುರಿಸಬೇಕಾಗಿದೆ. ಸುವೇಂದು ಅಧಿಕಾರಿ ಒಬ್ಬ ಕಳ್ಳ ಎಂದು ಬಿಜೆಪಿ ನಾಯಕರೇ ಹೇಳಿದ್ದರು. ಆದರೆ ಅವರ ಮನೆಯ ಮೇಲೆ ದಾಳಿ ನಡೆದಿಲ್ಲ. ಸತತವಾಗಿ ಟಿಎಂಸಿ ನಾಯಕರನ್ನೇ ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಕುನಾಲ್‌ ಹೇಳಿದ್ದಾರೆ. 
 
ಬಿಜೆಪಿ ಮುಖ್ಯಸ್ಥ ಸುಕಾಂತ್‌ ಮಜುಂದಾರ್‌ ಪ್ರತಿಕ್ರಿಯಿಸಿ, ರೋಹಿಂಗ್ಯಾಗಳಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಭ್ರಷ್ಟಾಚಾರದ ಆರೋಪಿಯೇ ಸ್ವತಃ ಅಧಿಕಾರಿಗಳ ಮೇಲೆ ದಾಳಿ ನಡೆಸುವುದು ಟಿಎಂಸಿ ನಾಯಕರ ವರ್ತನೆಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments