Webdunia - Bharat's app for daily news and videos

Install App

ಯಡಿಯೂರಪ್ಪ ಸಿಎಂ ಅಭ್ಯರ್ಥಿ ಆಗಲು ಆಕ್ಷೇಪಣೆಯಿಲ್ಲ: ಅತೃಪ್ತ ಮಾಜಿ ಶಾಸಕರು

Webdunia
ಮಂಗಳವಾರ, 28 ಜೂನ್ 2016 (15:13 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಿಎಂ ಅಭ್ಯರ್ಥಿ ಆಗಲು ಆಕ್ಷೇಪಣೆಯಿಲ್ಲ. ಆದರೆ, ಯಾವ ಕಾರಣಕ್ಕೆ ಹಿರಿಯ ಪದಾಧಿಕಾರಿಗಳನ್ನು ಕೈ ಬಿಟ್ಟು ಹೊಸಬರಿಗೆ ಆದ್ಯತೆ ನೀಡಲಾಗಿದೆ ಎನ್ನುವ ಬಗ್ಗೆ ಅವರು ಉತ್ತರಿಸಲೇಬೇಕು ಎಂದು ಮಾಜಿ ಸಚಿವರು, ಶಾಸಕರು ಒತ್ತಾಯಿಸಿದ್ದಾರೆ.
 
ಬೆಂಗಳೂರಿನ ಹೋಟೆಲ್‌ನಲ್ಲಿ ಸಭೆ ಸೇರಿರುವ ಅತೃಪ್ತ ಬಿಜೆಪಿ ಮುಖಂಡರು, ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದಾದರೆ ಸಂತೋಷ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಸಂಘಟನೆಯಲ್ಲಿ ದುಡಿಯದವರಿಗೆ ಪದಾಧಿಕಾರಿಗಳಲ್ಲಿ ಸ್ಥಾನ ನೀಡಿರುವುದು ವಿಷಾದದ ಸಂಗತಿಯಾಗಿದೆ ಎಂದು ಮಾಜಿ ಶಾಸಕರು ತಿಳಿಸಿದ್ದಾರೆ.
 
ಬಿಜೆಪಿಯ ರಾಜ್ಯದ ಹಿರಿಯ ನಾಯಕರು ಯಡಿಯೂರಪ್ಪ ಅವರ ಮನವೊಲಿಸಿ, ಆರೆಸ್ಸೆಸ್ ಮತ್ತು ಬಿಜೆಪಿಯಲ್ಲಿ ದುಡಿಯದ ವ್ಯಕ್ತಿಗಳಿಗೆ ಪದಾಧಿಕಾರಿಗಳ ಸ್ಥಾನ ನೀಡಬಾರದು ಎಂದು ಮನವಿ ಮಾಡಬೇಕಾಗಿ ಅತೃಪ್ತ ಬಿಜೆಪಿ ನಾಯಕರು ಕೋರಿದ್ದಾರೆ.
 
ಬೆಂಗಳೂರಿನ ನಾಯಕರು ಬಿ.ಎಸ್.ಯಡಿಯೂರಪ್ಪನವರಿಗೆ ಹೇಳಲು ಆಗುವುದಿಲ್ಲವಾ?  ಚುನಾವಣೆಯಲ್ಲಿ ನಾವು ಸೋತಿದ್ದೇವೆ ಎಂದರೆ ನಾಯಕರಲ್ಲ ಎಂದು ಅರ್ಥವೇ? ನಮ್ಮ ಜೊತೆ ನೀವು ಚುನಾವಣೆಯಲ್ಲಿ ಸೋಲನುಭವಿಸಿಲ್ಲವೇ ಎಂದು ಅತೃಪ್ತ ಮಾಜಿ ಶಾಸಕರು ಗುಡುಗಿದ್ದಾರೆ.    

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments