Webdunia - Bharat's app for daily news and videos

Install App

ಭಾರತ್ ಬಂದ್ ಗೆ - ಜನರಲ್ಲಿ ನಿರಾಸ ಪ್ರತಿಕ್ರಿಯೆ

Webdunia
ಸೋಮವಾರ, 27 ಸೆಪ್ಟಂಬರ್ 2021 (21:05 IST)
ಕೇಂದ್ರದ ಕೃಷಿ ಕಾನೂನು ವಿರೋಧಿಸಿ ನಡೆಸುತ್ತಿರುವ ಹೋರಾಟಕ್ಕೆ ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಕೆಲವು ರೈತ ಸಂಘಟನೆಗಳು ಭಾರತ ಬಂದ್‌ಗೆ ಇಂದು ಕರೆ ನೀಡಿದ್ದು, ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲಲ್ಲಿ ಕೆಲವರು ಪ್ರತಿಭಟನೆ ಮಾಡುತ್ತಿರುವುದನ್ನು ಹೊರತುಪಡಿಸಿದರೆ ಈ ಪ್ರತಿಭಟನೆಗೆ ಜನರು ಉತ್ಸಾಹ ತೋರುತ್ತಿಲ್ಲ.
 
ಹಲವೆಡೆಗಳಲ್ಲಿ ಪ್ರತಿಭಟನಾಕಾರರೇ ಜನರು, ವ್ಯಾಪಾರಸ್ಥರಲ್ಲಿ ಹೋಗಿ ಧಮ್ಕಿ ಹಾಕುತ್ತಿರುವ ಘಟನೆಗಳು ನಡೆಯುತ್ತಿವೆ. ಆದರೆ ಕೆಲವರು ಮಾತ್ರ ಪ್ರತಿಭಟನಾಕಾರರ ಉಸಾಬರಿಯೇ ಬೇಡವೆಂದು ವ್ಯಾಪಾರ- ವಹಿವಾಟು ಬಂದ್‌ ಮಾಡಿದ್ದರೆ, ಹಲವು ಜಿಲ್ಲೆಗಳಲ್ಲಿ ಯಾರೂ ಪ್ರತಿಭಟನಾಕಾರರ ಮಾತನ್ನು ಕೇಳದೇ ಇರುವುದು ಕಂಡುಬಂದಿದೆ. ಅಂಗಡಿ ಮುಂಗಟ್ಟು ಮುಚ್ಚಿ ಬಂದ್‌ಗೆ ಸಹಕರಿಸುವಂತೆ ಆಟೋ ಮೂಲಕ ಮನವಿ ಮಾಡಿದರೂ ಯಾರೂ ಕಿವಿಗೊಡುತ್ತಿಲ್ಲ. ಎಂದಿನಂತೆ ತಮ್ಮ ಕರ್ತವ್ಯದಲ್ಲಿ ತೊಡಗಿರುವುದು ಕಂಡುಬಂದಿದೆ.
 
ಕೊಪ್ಪಳದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಕಾರ್ಯಕರ್ತರು ತಲೆ ಮೇಲೆ ಇಟ್ಟಿಗೆ ಇಟ್ಟುಕೊಂಡು ವಿನೂತನವಾಗಿ ಪ್ರತಿಭಟನೆ ಮಾಡಿದರು. ಕೊಪ್ಪಳದ ಕೇಂದ್ರಿಯ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿ ಸುಗ್ರೀವಾಜ್ಞೆ ಹಿಂಪಡೆಯಲು ಒತ್ತಾಯ ಮಾಡಿದರು. ಹಾಸನ ಮಾರುಕಟ್ಟೆಯಲ್ಲಿ ಸಂಚರಿಸಿ ಪ್ರತಿಭಟನಾಕಾರರ ಆಕ್ರೋಶ…
 
ಹಾಸನದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ಪ್ರತಿಭಟನಾಕಾರರು ಜನರ ಬಳಿ ಹೋಗಿ ಒತ್ತಾಯಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಬೆದರಿಸಿ ಬಂದ್‌ ಮಾಡಿಸುತ್ತಿದ್ದಾರೆ. ಹೊಟ್ಟೆಗೆ ಏನ್‌ ತಿಂತೀರಿ? ರೈತರೇ ಇಲ್ಲದಿದ್ರೆ ಏನು ಮಾಡ್ತೀರಿ.. ಬಂದ್ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments