Select Your Language

Notifications

webdunia
webdunia
webdunia
webdunia

ಹೈದ್ರಾಬಾದ್ ಕರ್ನಟಕ ಇನ್ಮುಂದೆ ಕಲ್ಯಾಣ ಕರ್ನಾಟಕ

ಹೈದ್ರಾಬಾದ್ ಕರ್ನಟಕ ಇನ್ಮುಂದೆ ಕಲ್ಯಾಣ ಕರ್ನಾಟಕ
ಕಲಬುರಗಿ , ಭಾನುವಾರ, 15 ಸೆಪ್ಟಂಬರ್ 2019 (18:31 IST)
ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಅಂತ ಹೊಸ ನಾಮಕರಣ ಮಾಡಲಿದ್ದಾರೆ.

ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2019ರ ಅಂಗವಾಗಿ ನಡೆಯುವ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೆಪ್ಟೆಂಬರ್ 17ರಂದು ಪಾಲ್ಗೊಳ್ಳುವರು.

ಅಂದು ಮಧ್ಯಾಹ್ನ 12.30 ಗಂಟೆಗೆ ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಘೋಷಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ, ಸರ್ಕಾರಿ ಸೌಲಭ್ಯಗಳನ್ನು ವಿತರಣೆ ಮಾಡಲಿದ್ದಾರೆ.  

ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ.  ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ ಹಾಗೂ ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ  ಪಾಲ್ಗೊಳ್ಳುವರು.




Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಹಾಜರ್: ಕಲ್ಯಾಣ ಕರ್ನಾಟಕ ಉತ್ಸವ ಸೆ. 17ಕ್ಕೆ