Webdunia - Bharat's app for daily news and videos

Install App

ಹೈದ್ರಾಬಾದ್ ಕರ್ನಟಕ ಇನ್ಮುಂದೆ ಕಲ್ಯಾಣ ಕರ್ನಾಟಕ

Webdunia
ಭಾನುವಾರ, 15 ಸೆಪ್ಟಂಬರ್ 2019 (18:31 IST)
ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಅಂತ ಹೊಸ ನಾಮಕರಣ ಮಾಡಲಿದ್ದಾರೆ.

ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2019ರ ಅಂಗವಾಗಿ ನಡೆಯುವ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೆಪ್ಟೆಂಬರ್ 17ರಂದು ಪಾಲ್ಗೊಳ್ಳುವರು.

ಅಂದು ಮಧ್ಯಾಹ್ನ 12.30 ಗಂಟೆಗೆ ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಘೋಷಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ, ಸರ್ಕಾರಿ ಸೌಲಭ್ಯಗಳನ್ನು ವಿತರಣೆ ಮಾಡಲಿದ್ದಾರೆ.  

ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ.  ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ ಹಾಗೂ ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ  ಪಾಲ್ಗೊಳ್ಳುವರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments