Webdunia - Bharat's app for daily news and videos

Install App

ಸಂಸದ ಪ್ರತಾಪ್ ಸಿಂಹ ಖಡಕ್ ಎಚ್ಚರಿಕೆ ನೀಡಿದ್ಯಾರಿಗೆ?

Webdunia
ಬುಧವಾರ, 22 ಆಗಸ್ಟ್ 2018 (15:09 IST)
ಮೈಸೂರು: ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಕೆಟ್ಟದ್ದಾಗಿ ಕಮೆಂಟ್ ಮಾಡುವವರಿಗೆ ಸಂಸದ ಪ್ರತಾಪ್ ಸಿಂಹ ಫೇಸ್ ಬುಕ್ ಲೈವ್ ನಲ್ಲೆ ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.


`ಬಾಯಿ ಬಂದ ಹಾಗೆ ಕಮೆಂಟ್ ಮಾಡೋದು ಸರಿಯಲ್ಲ. ನನಗೂ ಎಲ್ಲಾ ಭಾಷೆಯಲ್ಲೂ ಬೈಯೋಕೆ ಬರುತ್ತೆ. ಉತ್ತರ ಕರ್ನಾಟಕ, ತುಳು ಭಾಷೆಯಲ್ಲೂ ನಾನು ಮಾತಾಡುತ್ತೇನೆ. ಆದರೆ ನನಗೆ ನಿಮ್ಮ ಸಂಸ್ಕೃತಿ ಇಲ್ಲ. ಎಲ್ಲರಿಗೂ ಒಂದೊಂದು ಪಕ್ಷ ಇರುತ್ತೆ. ಹಾಗಂತ ಬಾಯಿಗೆ ಬಂದ ಹಾಗೇ ಇನ್ನೊಬ್ಬರನ್ನು ಟೀಕಿಸಬಾರದು. ನೀವು ಮಾತಾಡುವ ಭಾಷೆಯನ್ನ ನನಗೆ ಮಾತನಾಡಕ್ಕೆ ಬರುತ್ತೆ. ಆದರೆ ಅದು ಅಸಹ್ಯ ಆಗುತ್ತೆ. ಟೀಕೆ ಮಾಡಿ ಮಾತಾಡಬಾರದು ಅಂತಲ್ಲ. ಒಳ್ಳೆಯ ಭಾಷೆಯಲ್ಲಿ ಟೀಕೆ ಮಾಡಿ’ ಎಂದು ಎಚ್ಚರಿಕೆ ನೀಡಿದ್ದಾರೆ.

 
‘ಕೊಡಗು ಕೊಚ್ಚಿ ಹೋಗುತ್ತಿದೆ, ಪ್ರತಾಪ್ ಸಿಂಹ ಎಲ್ಲಿ ಅಂತೀರಲ್ಲ. ನಾನು ಮಳೆ ಪ್ರಾರಂಭವಾದಗಿನಿಂದಲೂ ಕೊಡಗಿನಲ್ಲೇ ಇದ್ದೇನೆ. ನಾನು ಹಾಗೂ ನನ್ನ ಕಾರ್ಯಕರ್ತರು ಅವರ ನೆರವಿಗೆ ಧಾವಿಸಿದ್ದೇವೆ. ಮೊದಲು ನಾವೇ ಅಲ್ಲಿ ಪರಿಹಾರ ಕೇಂದ್ರ ತೆರೆದಿದ್ದು. ಈಗಲೂ ನಾವು ಇಲ್ಲೇ ಇದ್ದು ಅವರ ಬೆಂಬಲಕ್ಕೆ ನಿಂತಿದ್ದೇವೆ. ಇನ್ನಾದರೂ ಅವಾಚ್ಯ ಶಬ್ಧ ಬಳಕೆ ಮಾಡದೇ ಒಳ್ಳೆಯ ಶಬ್ಧಗಳಿಂದ ಟೀಕೆ ಮಾಡಿ. ನನಗೂ ಆ ರೀತಿ ಮಾತಾಡೋಕೆ ಬರುತ್ತೆ’ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments