ಎಸ್.ಆರ್.ಹಿರೇಮಠ್ ಕೈ ಜೋಡಿಸಿದ್ದು ಯಾರಿಗೆ?

Webdunia
ಮಂಗಳವಾರ, 10 ಸೆಪ್ಟಂಬರ್ 2019 (17:01 IST)
ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಈ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.

ಬೆಂಗಳೂರಿನಲ್ಲಿ ಭೂಗಳ್ಳರ ಹಾವಳಿಯಿಂದ ಅದೆಷ್ಟೋ ಕೆರೆಗಳು ಮಾಯವಾಗಿವೆ. ಖ್ಯಾತ ಬಿಲ್ಡರ್ ಸಂಸ್ಥೆಯೊಂದು  ಕೆರೆಗೆ ನೀರು ಹರಿಯದಂತೆ ಮಾಡಿ ಕೆರೆಯ ಜಾಗವನ್ನು ಕಬಳಿಸಿದ್ದಾರೆ ಎಂದು ಗ್ರಾಮಸ್ಥರು  ಆರೋಪಿಸಿದ್ದಾರೆ. ಕಾಮಗಾರಿ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆಗೆ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಬೆಂಬಲ ಸೂಚಿಸಿದ್ದಾರೆ.

ವಾಯ್ಸ್ ಆಫ್ ಸರ್ಜಾಪುರ ಸಂಘಟನೆಯ ಸದಸ್ಯರು ಹಾಗೂ ಸರ್ಜಾಪುರ ಗ್ರಾಮಸ್ಥರು ಸರ್ಜಾಪುರದ ದೊಡ್ಡಕೆರೆ ಉಳಿಸುವ ಸಲುವಾಗಿ ಸ್ಥಳೀಯರು ಹಾಗೂ ಪರಿಸರ ಹೋರಾಟಗಾರು ಸೇರಿ ಈ ಸಂಘಟನೆ ಮಾಡಿಕೊಂಡಿದ್ದು ದೊಡ್ಡಕೆರೆಗೆ ಬರುವ ಮಳೆ ನೀರಿನ ಮೂಲ ರಾಜಕಾಲುವೆಯನ್ನು ಹಾಗೂ ಕೆರೆಯ ಒಂದಷ್ಟು ಜಾಗ ಸರ್ಕಾರಿ ಜಮೀನನ್ನು ಕಬಳಿಸಿದ್ದಾರೆ.

ಪ್ರೆಸ್ಟ್ರಿಜ್ ಎಂಬ ಬಿಲ್ಡರ್ ಸಂಸ್ಥೆ ಆನೇಕಲ್ ತಾಲೂಕಿನ ಯಮರೆ ಗ್ರಾಮದ ಬಳಿ ಸುಮಾರು 180 ಎಕರೆ ಜಾಗದಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಲು ಮುಂದಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ರು. ಇನ್ನು ಈ ಪ್ರತಿಭಟನೆಗೆ ಪರಿವರ್ತನಾ ಸಂಸ್ಥೆಯ ಎಸ್.ಆರ್.ಹಿರೇಮಠ್ ಹಾಗೂ ಸಾಮಾಜಿಕ ಹೋರಾಟಗಾರ ರವಿಕೃಷ್ಣಾ ರೆಡ್ಡಿ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇನ್ನು ಈ ಅವ್ಯವಹಾರದಲ್ಲಿ ಯಮರೆ ಪಂಚಾಯಿತಿ ಅಧಿಕಾರಿಗಳು ಶಾಮೀಲಾಗಿದ್ದು ಸರ್ಕಾರಿ ಜಾಗದ ಜೊತೆ ಸೇರಿಸಿ ಪ್ರೆಸ್ಟ್ರಿಜ್ ಬಿಲ್ಡರ್ಸ್'ಗೆ ಹುಂಡಿ ಖಾತೆ ಮಾಡಿಕೊಡಲಾಗಿದೆ ಎಂದು  ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಶಾಲೆ ಪುನರಾಂಭವಾಗಿ 18ದಿನಗಳಾದರೂ ದಕ್ಷಿಣ ಕನ್ನಡದ 20ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ

Karnataka MLC Election, ಅಡ್ಡಮತದಾನದ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟ ಬಿ.ವೈ. ವಿಜಯೇಂದ್ರ

Karnataka MLC Election: ಕಾಂಗ್ರೆಸ್‌ಗೆ 5ಸ್ಥಾನ, ಬಿಜೆಪಿಗೆ 2, ಜೆಡಿಎಸ್‌ಗೆ ಸೋಲು

ಮುಂದಿನ ಸುದ್ದಿ
Show comments