Webdunia - Bharat's app for daily news and videos

Install App

ಎಸ್.ಆರ್.ಹಿರೇಮಠ್ ಕೈ ಜೋಡಿಸಿದ್ದು ಯಾರಿಗೆ?

Webdunia
ಮಂಗಳವಾರ, 10 ಸೆಪ್ಟಂಬರ್ 2019 (17:01 IST)
ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಈ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.

ಬೆಂಗಳೂರಿನಲ್ಲಿ ಭೂಗಳ್ಳರ ಹಾವಳಿಯಿಂದ ಅದೆಷ್ಟೋ ಕೆರೆಗಳು ಮಾಯವಾಗಿವೆ. ಖ್ಯಾತ ಬಿಲ್ಡರ್ ಸಂಸ್ಥೆಯೊಂದು  ಕೆರೆಗೆ ನೀರು ಹರಿಯದಂತೆ ಮಾಡಿ ಕೆರೆಯ ಜಾಗವನ್ನು ಕಬಳಿಸಿದ್ದಾರೆ ಎಂದು ಗ್ರಾಮಸ್ಥರು  ಆರೋಪಿಸಿದ್ದಾರೆ. ಕಾಮಗಾರಿ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆಗೆ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಬೆಂಬಲ ಸೂಚಿಸಿದ್ದಾರೆ.

ವಾಯ್ಸ್ ಆಫ್ ಸರ್ಜಾಪುರ ಸಂಘಟನೆಯ ಸದಸ್ಯರು ಹಾಗೂ ಸರ್ಜಾಪುರ ಗ್ರಾಮಸ್ಥರು ಸರ್ಜಾಪುರದ ದೊಡ್ಡಕೆರೆ ಉಳಿಸುವ ಸಲುವಾಗಿ ಸ್ಥಳೀಯರು ಹಾಗೂ ಪರಿಸರ ಹೋರಾಟಗಾರು ಸೇರಿ ಈ ಸಂಘಟನೆ ಮಾಡಿಕೊಂಡಿದ್ದು ದೊಡ್ಡಕೆರೆಗೆ ಬರುವ ಮಳೆ ನೀರಿನ ಮೂಲ ರಾಜಕಾಲುವೆಯನ್ನು ಹಾಗೂ ಕೆರೆಯ ಒಂದಷ್ಟು ಜಾಗ ಸರ್ಕಾರಿ ಜಮೀನನ್ನು ಕಬಳಿಸಿದ್ದಾರೆ.

ಪ್ರೆಸ್ಟ್ರಿಜ್ ಎಂಬ ಬಿಲ್ಡರ್ ಸಂಸ್ಥೆ ಆನೇಕಲ್ ತಾಲೂಕಿನ ಯಮರೆ ಗ್ರಾಮದ ಬಳಿ ಸುಮಾರು 180 ಎಕರೆ ಜಾಗದಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಲು ಮುಂದಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ರು. ಇನ್ನು ಈ ಪ್ರತಿಭಟನೆಗೆ ಪರಿವರ್ತನಾ ಸಂಸ್ಥೆಯ ಎಸ್.ಆರ್.ಹಿರೇಮಠ್ ಹಾಗೂ ಸಾಮಾಜಿಕ ಹೋರಾಟಗಾರ ರವಿಕೃಷ್ಣಾ ರೆಡ್ಡಿ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇನ್ನು ಈ ಅವ್ಯವಹಾರದಲ್ಲಿ ಯಮರೆ ಪಂಚಾಯಿತಿ ಅಧಿಕಾರಿಗಳು ಶಾಮೀಲಾಗಿದ್ದು ಸರ್ಕಾರಿ ಜಾಗದ ಜೊತೆ ಸೇರಿಸಿ ಪ್ರೆಸ್ಟ್ರಿಜ್ ಬಿಲ್ಡರ್ಸ್'ಗೆ ಹುಂಡಿ ಖಾತೆ ಮಾಡಿಕೊಡಲಾಗಿದೆ ಎಂದು  ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments