Publish Date: Sat, 10 Sep 2022 (19:04 IST)
Updated Date: Sat, 10 Sep 2022 (19:07 IST)
ಇಂದು, ಮತ್ತೆ ನಾಳೆ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಹುಬ್ಬಳ್ಳಿಯಿಂದ ಬಾದಾಮಿಗೆ ರಸ್ತೆ ಮೂಲಕ ಪ್ರಯಾಣ ಬೆಳಸಲಿದ್ದು. ಬಾದಾಮಿ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಮಳೆ ಹಾನಿ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಸಾರ್ವಜನಿಕರ ಅಹವಾಲು ಸ್ವೀಕರಿಸಲಿರುವ ಸಿದ್ದರಾಮಯ್ಯ. ಇಂದು ಬಾದಾಮಿಯಲ್ಲಿ ವಾಸ್ತವ್ಯ ಹೂಡುವ ಸಿದ್ದರಾಮಯ್ಯ ನಾಳೆ ಮಧ್ಯಾನ.12 ಗಂಟೆಗೆ, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಜಕನೂರು ಗ್ರಾಮದ ಮಾದಣ್ಣ ಮದಗೊಂಡೇಶ್ವರ ಮಠದ ಉತ್ಸವದಲ್ಲಿ ಭಾಗಿಯಾಗಿ ಜಮಖಂಡಿಯಿಂದ ರಸ್ತೆ ಮೂಲಕ ಹುಬ್ಬಳ್ಳಿ ಇಂದ ಬೆಂಗಳೂರಿಗೆ ಆಗಮಿಸಲಿರುವ ಸಿದ್ದರಾಮಯ್ಯ.