Webdunia - Bharat's app for daily news and videos

Install App

ರಾಷ್ಟ್ರದೆಲ್ಲೆಡೆ ಇಂದು ಹೋಳಿಯ ರಂಗು: ಸಚಿವ ರಾಜನಾಥ್ ಸಿಂಗ್ ಭಾಗಿ

Webdunia
ಶುಕ್ರವಾರ, 6 ಮಾರ್ಚ್ 2015 (09:33 IST)
ಇಂದು ಹೋಳಿ ಹಬ್ಬ ಇರುವ ಹಿನ್ನೆಲೆಯಲ್ಲಿ ರಾಷ್ಟ್ರದೆಲ್ಲೆಡೆ ಹೋಳಿಯ ರಂಗಿನೋಕುಳಿ ರಂಗೇರಿದ್ದು, ಶ್ರೀಕೃಷ್ಣನ ಜನ್ಮ ಸ್ಥಳವಾದ ಉತ್ತರ ಪ್ರದೇಶ ರಾಜ್ಯದ ಮಥುರಾದಲ್ಲಿ ಅಕ್ಷರಶಃ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ಸ್ಥಳೀಯರು ಹಲವು ರೀತಿಯ ಬಣ್ಣಗಳನ್ನು ಪರಪಸ್ಪರವಾಗಿ ಹಚ್ಚಿಕೊಳ್ಳುವ ಮೂಲಕ ಹೋಳಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. 
 
ತಮಿಳುನಾಡು ರಾಜ್ಯಧಾನಿ ಚೆನ್ನೈನಲ್ಲಿಯೂ ಕೂಡ ಹೋಳಿಯನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ಇದರಲ್ಲಿ ವಿದೇಶಿಗರೂ ಕೂಡ ಭಾಗಿಯಾಗಿ ಸಂಭ್ರಮಿಸುತ್ತಿದ್ದಾರೆ. ವಿಶೇಷವೆಂದರೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೂ ಕೂಡ ಉತ್ತರ ಪ್ರದೇಶದ ಲಖನೌ ನಗರದ ಹೋಳಿ ಸಂಭ್ರಮದಲ್ಲಿ ಭಾಗಿಯಾಗಿ ಸಾರ್ವಜನಿಕರೊಂದಿಗೆ ಬಣ್ಣ ಎರಚಿ ಸಂಭ್ರಮಿಸಿದರು. ರಾಷ್ಟ್ರದ ಇತರೆ ಪ್ರದೇಶಗಳಾದ ಉಜ್ಜಯಿನಿ, ಸೇಲಂ, ಕೋಲ್ಕತ್ತಾ ಸೇರಿದಂತೆ ಇನ್ನಿತರೆ ಪ್ರದೇಶಗಳಲ್ಲಿಯೂ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದೆ.  
 
ಇನ್ನು ರಾಜ್ಯದಲ್ಲಿಯೂ ಕೂಡ ಹೋಳಿ ಹಬ್ಬದ ಸಂಭ್ರಮ ಮುಗಿಲು ಮುಟ್ಟಿದ್ದು, ಧಾರವಾಡದಲ್ಲಿ ಮಕ್ಕಳನ್ನು ಹಬ್ಬಕ್ಕೆಂದೇ ವಿಶೇಷವಾಗಿ ಸಿಂಗರಿಸಿ ಹೋಳಿಯನ್ನು ಆಚರಿಸದರೆ, ಯಾದಗಿರಿ, ಬೆಳಗಾವಿಯಲ್ಲಿ ಯುವಕರು, ಮಹಿಳೆಯರು ಹಾಗೂ ಮಕ್ಕಳು ಎಲ್ಲರೂ ಸೇರಿ ಪರಸ್ಪರವಾಗಿ ಬಣ್ಣಗಳನ್ನು ಎರಚಿಕೊಳ್ಳುತ್ತಾ ಸಂಭ್ರಮಿಸುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments