ಇಂದು ಐತಿಹಾಸಿಕ ಬೆಂಗಳೂರು ಕರಗ

Webdunia
ಗುರುವಾರ, 6 ಏಪ್ರಿಲ್ 2023 (16:00 IST)
ಚೈತ್ರ ಪೌರ್ಣಮಿಯ ಬೆಳದಿಂಗಳಲ್ಲಿ ಐತಿಹಾತಿಕ ಬೆಂಗಳೂರು ಕರಗ ಶಕ್ತ್ಯೋತ್ಸವವು ಗುರುವಾರ ಮಧ್ಯರಾತ್ರಿ ವಿಜೃಂಭಣೆಯಿಂದ ಜರುಗಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹಿಂದೂ ಪಂಚಾಂಗದ ಪ್ರಕಾರ ಚೈತ್ರ ಪೌರ್ಣಮಿಯ ಗುರುವಾರ ಮಧ್ಯರಾತ್ರಿ ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಲಿದೆ. ಮಧ್ಯರಾತ್ರಿ 12.30ಕ್ಕೆ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಹೊರಡುವ ಹೂವಿನ ಕರಗವನ್ನು ಈ ಬಾರಿಯೂ ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ ಹೊರಲಿದ್ದಾರೆ. ಕರಗ ಹೊರಲಿರುವ ಜ್ಞಾನೇಂದ್ರ ಅವರು ಬೆಳಗ್ಗೆ 10.30ಕ್ಕೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಗೌಡರು, ಗಣಾಚಾರಿ ಹಾಗೂ ಗಂಟೆ ಪೂಜಾರಿಗಳ ಜತೆ ಮೊದಲನೇ ಸ್ನಾನಘಟ್ಟ ಕಬ್ಬನ್‍ಪಾರ್ಕ್‍ನ ಕರಗದ ಕುಂಟೆಗೆ ತೆರಳಿ ಅಲ್ಲಿ ಪ್ರಥಮ ಪೂಜೆ, ಗಂಗೆ ಪೂಜೆ ಸೇರಿ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದಾರೆ. ಈ ಮೆರವಣಿಗೆಯು ಕಬ್ಬನ್‌ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ, ಬಳೆಪೇಟೆ, ದೊಡ್ಡಪೇಟೆ, ಕುಂಬಾರಪೇಟೆ, ಗೊಲ್ಲರಪೇಟೆ, ಹಲಸೂರು, ಕೆಆರ್‌ ಮಾರುಕಟ್ಟೆ, ಕಾಟನ್‌ಪೇಟೆ ಮತ್ತಿತರ ಪ್ರದೇಶಗಳಲ್ಲಿ ಸುಮಾರು 38 ಕಿ.ಮೀ ಸಂಚರಿಸಿ ಮರಳಿ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಲಾಗುವುದು. ನಂತರ ಶುಕ್ರವಾರ ಮಧ್ಯರಾತ್ರಿ 12.30ಕ್ಕೆ ಕರಗ ಮೆರವಣಿಗೆ ದೇವಸ್ಥಾನದಿಂದ ಹೊರ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments