Webdunia - Bharat's app for daily news and videos

Install App

ಹಿರಿತನಕ್ಕೆ ಬೆಲೆ ಇಲ್ಲದ ಪಕ್ಷಕ್ಕೆ ಭವಿಷ್ಯ ಇರುವುದಿಲ್ಲ: ಎಸ್.ಎಂ.ಕೃಷ್ಣ

Webdunia
ಭಾನುವಾರ, 29 ಜನವರಿ 2017 (13:20 IST)
'ಹಿರಿತನಕ್ಕೆ ಬೆಲೆ ಇಲ್ಲದ ಪಕ್ಷಕ್ಕೆ ಭವಿಷ್ಯ ಇರುವುದಿಲ್ಲ'. ಇಂದು ನಾನು ಅತ್ಯಂತ ನೋವಿನಿಂದ ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೇಸರ ವ್ಯಕ್ತಪಡಿಸಿದರು.
 
ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ರಾಜೀನಾಮೆ ಕುರಿತು ಪುನರ್‌ಪರಿಶೀಲಿಸುವಂತೆ ಹಲವರು ಮನವಿ ಮಾಡಿಕೊಂಡರು. ಈ ಕುರಿತು ದೆಹಲಿಯಿಂದಲೂ ಸಹ ಕರೆ ಬಂದಿತ್ತು. ಅವರೆಲ್ಲರಿಗೂ ಋಣಿಯಾಗಿರುತ್ತೇನೆ ಎಂದರು.
 
ನಾನು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಆದರೆ, ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ. ನಿವೃತ್ತಿ ಎನ್ನುವುದು ನನ್ನ ಪದಕೋಶದಲೇ ಇಲ್ಲ ಎಂದು ತಿಳಿಸಿದರು.
 
ಇಂದು ನಾನು ಕಾಂಗ್ರೆಸ್ ಪಕ್ಷ ತೈಜಿಸುತ್ತಿದ್ದೇನೆ. ರಾಜೀನಾಮೆ ನಿರ್ಧಾರಕ್ಕೆ ನಾನು ಬದ್ಧವಾಗಿದ್ದೇನೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನನಗೆ ಸಾಕಷ್ಟು ಗೌರವ ನೀಡಿದ್ದಾರೆ. ಅದರಂತೆ ನಾನು ಸಹ ಅವರನ್ನು ಗೌರವಿಸಿದ್ದೇನೆ. ಆದಷ್ಟು ಬೇಗ ಅವರ ಆರೋಗ್ಯ ಸುಧಾರಿಸಲಿ ಎಂದು ದೇವರಲ್ಲಿ ಬೇಡಿಕೊಂಡರು.
 
ಸತತ 46 ವರ್ಷಗಳ ಕಾಲ ನಮ್ಮ ಮನೆಯಂತಿದ್ದ ಕಾಂಗ್ರೆಸ್ ಪಕ್ಷವನ್ನು ಇಂದು ತೊರೆಯಬೇಕಾದ ಸ್ಥಿತಿ ಬಂದಿದೆ. ಇದು ಅತ್ಯಂತ ನೋವಿನ ಸಂದರ್ಭ. ರಾಜ್ಯ ಸರಕಾರದ ಕುರಿತು ಮಾತನಾಡುವುದಿಲ್ಲ. ಮುಂದಿನ ನಿರ್ಧಾರ ನೋಡಿಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಎಂದರು. 

ಬಿಜೆಪಿ ಸೇರ್ಪಡೆ?
 
ಕಾಂಗ್ರೆಸ್ ತೈಜಿಸಿ ಬಿಜೆಪಿ ಪಕ್ಷ ಸೇರುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಗುತ್ತಲೇ ಬಾಣ ಬಿಟ್ಟ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಇದೇನು ಅಸೆಬ್ಲಿಯಾ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments