Webdunia - Bharat's app for daily news and videos

Install App

ಕರ್ನಾಟಕ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

Webdunia
ಶನಿವಾರ, 18 ಏಪ್ರಿಲ್ 2015 (09:44 IST)
ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿರುವ ತಮಿಳುನಾಡು ಸರಕಾರದ ಧೋರಣೆಯನ್ನು ಖಂಡಿಸಿ ಇವತ್ತು ಸಂಪೂರ್ಣ ಕರ್ನಾಟಕ ಬಂದ್ ಘೋಷಿಸಲಾಗಿದೆ.ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿರುವ ರಾಜ್ಯ ಬಂದ್‌ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಬೆಳಗ್ಗೆ ಆರು ಗಂಟೆಯಿಂದಲೇ ಬಂದ್ ಪ್ರಾರಂಭವಾಗಿದ್ದು ಸಂಜೆ 6 ಗಂಟೆವರೆಗೆ ಮುಂದುವರೆಯಲಿದೆ.
 
ಬಂದ್‍ಗೆ ಸುಮಾರು 500ಕ್ಕೂ ಹೆಚ್ಚು ಸಂಘಟನೆಗಳು ಸಮರ್ಥನೆ ನೀಡಿವೆ. ಬಹುತೇಕ ಹೋಟೆಲ್‍ಗಳು, ಸಿನಿಮಾ ಮಂದಿರಗಳು, ಮಾಲ್‍ಗಳು, ಬಂಕ್‍ಗಳು, ಜ್ಯುವೆಲ್ಲರಿ ಶಾಪ್‍ಗಳು ತೆರೆಯಲ್ಪಡುವುದಿಲ್ಲ. ಆದರೆ ರೈಲು ಸಂಚಾರ, ಅಂಬ್ಯುಲೆನ್ಸ್, ಮೆಡಿಕಲ್, ಆಸ್ಪತ್ರೆಗಳು ಕಾರ್ಯನಿರ್ವಹಿಸಲಿದ್ದು ಹಾಲು ಪೂರೈಕೆಯಾಗಲಿದೆ. 
 
ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರಿನಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 
 
ರಾಮನಗರದ ಐಜೂರು ಸರ್ಕಲ್ ಬಳಿ ಧರಣಿ ನಡೆಸುತ್ತಿರುವ ಕಸ್ತೂರಿ ಕರ್ನಾಟಕ ಜನಪರ ವೇದಿಕೆ  ಟೈರ್‍‌ಗೆ ಬೆಂಕಿ ಹಚ್ಚಿ  ಆಕ್ರೋಶ ವ್ಯಕ್ತಪಡಿಸಿತು. ಜತೆಗೆ ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ, ಮಾಜಿ ಸಿಎಂ ಜಯಲಲಿತಾ ಪ್ರತಿಕೃತಿ ದಹಿಸಲಾಯಿತು.

ಬಂದ್ ಹಿನ್ನೆಲೆಯಲ್ಲಿ ಶನಿವಾರ ನಿಗದಿಯಾಗಿದ್ದ ಪದವಿ, ಡಿಪ್ಲೊಮಾ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments