‘ಮೊಳಕಾಲ್ಮೂರಿನಿಂದ ಸ್ಪರ್ಧೆ ಖಚಿತ’

Webdunia
ಶುಕ್ರವಾರ, 14 ಏಪ್ರಿಲ್ 2023 (19:40 IST)
ಮೊಳಕಾಲ್ಮೂರು ಬಂಡಾಯ ಶಮನ ಯಶಸ್ವಿಯಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಪೋಸ್ಟ್‌ ಹಾಕಿದ್ದು, ಇದು ಶುದ್ದ ಸುಳ್ಳೆಂದು ಟಿಕೆಟ್‌ ಆಕಾಂಕ್ಷಿಯಾಗಿದ್ದ ಯೋಗೇಶ್‌ ಬಾಬು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಡಿಕೆಶಿ ಸುಳ್ಳು ಸುದ್ದಿ ಪ್ರಚಾರ ಮಾಡಿದ್ರಾ ಎಂಬ ಪ್ರಶ್ನೆ ಎದ್ದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್‌ ಮಾಜಿ ಶಾಸಕ N.Y. ಗೋಪಾಲಕೃಷ್ಣಗೆ ಟಿಕೆಟ್‌ ನೀಡಲಾಗಿದೆ. ಟಿಕೆಟ್ ಸಿಗದೆ ನೊಂದಿದ್ದ ಯೋಗೇಶ್ ಬಾಬು ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ. ಯೋಗೇಶ್‌ ಬಾಬು ಅವರೊಂದಿಗೆ ಯಶಸ್ವಿ ಸಂಧಾನ ಮಾತುಕತೆ ನಡೆಸಲಾಯಿತು.. ಅವರ ರಾಜಕೀಯ ಬೆಳವಣಿಗೆಗೆ ಪಕ್ಷವು ಬೆನ್ನೆಲುಬಾಗಿ ನಿಲ್ಲುವುದಾಗಿ ಭರವಸೆ ನೀಡಿ ಅವರನ್ನು ಸಂತೈಸಲಾಯಿತು ಎಂದು ಡಿಕೆಶಿ ಪೋಸ್ಟ್‌ ಹಾಕಿದ್ದರು. ಜೊತೆಗೆ ಬಾಬು ಅವರೊಂದಿಗಿನ ಫೋಟೋ ಕೂಡ ಹಂಚಿಕೊಂಡಿದ್ದರು. ಆದರೆ ಇದು ಸುಳ್ಳು ಎಂದು ಯೋಗೇಶ್‌ ಬಾಬು ಹೇಳಿದ್ದಾರೆ. ಬೇರೊಂದು ವಿಚಾರದ ಚರ್ಚೆಗೆಂದು ಡಿಕೆಶಿ ಕರೆದಿದ್ದರು. ಸಂಧಾನ ಯಶಸ್ವಿ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿದ್ದಾರೆ.. ಇದೆಲ್ಲ ಸುಳ್ಳು, ಗ್ರಾಮ ಪಂಚಾಯಿತಿವಾರು ಅಭಿಪ್ರಾಯ ಕೇಳುತ್ತಿದ್ದೇನೆ. ಮೊಳಕಾಲ್ಮೂರಿಂದ ಸ್ಪರ್ಧೆ ಮಾಡುವುದು ಖಚಿತ ಎಂದು ಬಾಬು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮೈಸೂರಿನಲ್ಲಿ ಡಿಕೆಶಿ ಜತೆಗೆ ರಾಹುಲ್ ಆಡಿದ ಮಾತಿನ ಬಗ್ಗೆ ಡಿಕೆ ಸುರೇಶ್ ಹೀಗಂದ್ರು

ರಿಯಲ್ ಎಸ್ಟೇಟ್ ಕಚೇರಿಗಳಂತಾದ ಪೊಲೀಸ್ ಇಲಾಖೆ: ಅಶ್ವತ್ಥನಾರಾಯಣ್

ಮೈಕ್‌ ಆಫ್ ಮಾಡಿ ರಾಷ್ಟ್ರಗೀತೆಗೆ ಅಪಮಾನ, ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ

ರಾಸಲೀಲೆ ಪ್ರಕರಣದಲ್ಲಿ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರ ರಾವ್ ಅವರ ವೈಯ್ಯಕ್ತಿಕ ಬದುಕು ಹೀಗಿದೆ

ಮುಂದಿನ ಸುದ್ದಿ
Show comments