Webdunia - Bharat's app for daily news and videos

Install App

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಟೋಲ್ ಸಂಗ್ರಹ ಆರಂಭ

Webdunia
ಸೋಮವಾರ, 27 ಫೆಬ್ರವರಿ 2023 (14:47 IST)
ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಮೊದಲ ಟೋಲ್ ಆರಂಭವಾಗಿದ್ದು,ಬೆಂಗಳೂರು-ನಿಡಘಟ್ಟ ನಡುವಿನ ಶೇಷಗಿರಿಹಳ್ಳಿಯ ಟೋಲ್ ಕಾರ್ಯಾಚರಣೆ ಮಂಗಳವಾರದಿಂದ ಶುರುವಾಗಲಿದೆ.ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ ರಸ್ತೆಗೆ ಶುಲ್ಕ ವಸೂಲಿ ಕುರಿತು ಕೇಂದ್ರ ಹೆದ್ದಾರಿ ಪ್ರಾಧಿಕಾರದಿಂದ ಪ್ರಕಟಣೆ ಹೊರಡಿಸಿದೆ.ವಿವಿಧ ಮಾದರಿಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿಯಾಗಿದೆ. ಹೆದ್ದಾರಿ ಪ್ರಾಧಿಕಾರ ಸರ್ವೀಸ್ ರಸ್ತೆ ಹೊರತುಪಡಿಸಿ, ಉಳಿದ ಆರು ಪಥಗಳಿಗೆ ಶುಲ್ಕ ನಿಗದಿ ಮಾಡಿದೆ. 
 
ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರು ನಡುವೆ ಸಂಚಾರ ಸಮಯವನ್ನು ಕಡಿಮೆ ಮಾಡುವ ಸಲುವಾಗಿ ಸರ್ಕಾರ ನೂತನ ಎಕ್ಸ್ಪ್ರೆಸ್ ವೇ ನಿರ್ಮಾಣಕ್ಕೆ ಮುಂದಾಗಿದೆ.ಎರಡು ಹಂತದಲ್ಲಿ ನಿರ್ಮಾಣ ಮಾಡಲಾಗುತ್ತಿರುವ  ಹೆದ್ದಾರಿಯ ಮೊದಲ ಹಂತದ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ.ಎರಡನೆ ಹಂತದ ಕಾಮಗಾರಿಯು ಚಾಲ್ತಿಯಲ್ಲಿದ್ದು, ಮುಕ್ತಾಯದ ಹಂತ ತಲುಪಿದೆ.ಎರಡು ಹಂತದ ಕಾಮಗಾರಿ ಮುಗಿಯುವ ಮುನ್ನವೇ ಸರ್ಕಾರ ಮೊದಲ ಹಂತದ ಸಂಚಾರಕ್ಕೆ ಟೋಲ್ ದರ ನಿಗದಿ ಪಡಿಸಿದೆ. ಫೆ.28ರ ಮಂಗಳವಾರದಿಂದಲೇ ಈ ನಿಯಮ ಜಾರಿಗೆ ಬರಲಿದೆ.ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಟೋಲ್‌ ಶುಲ್ಕದ ವಿವರವಾಹನಗಳು ಏಕಮುಖ ಸಂಚಾರ = ಅದೇ ದಿನ ವಾಪಸ್ = ಟೋಲ್‌ ಪ್ಲಾಜಾ ಜಿಲ್ಲೆಯ ವಾಹನ= ಒಂದು ತಿಂಗಳ 50 ಸಂಚಾರಕ್ಕೆ ಪಾಸ್ ಕಾರು/ಜೀಪು/ವ್ಯಾನ್ 135 ರೂ. 205 ರೂ. 70 ರೂ. 4,525 ರೂ.ಲಘು ಗೂಡ್ಸ್ ವಾಹನ/ ಮಿನಿ ಬಸ್ 220 ರೂ. 330 ರೂ. 110 ರೂ. 7,315 ರೂ. ಬಸ್/ 2 ಆಕ್ಸಲ್‌ ಟ್ರಕ್‌ 460 ರೂ. 690 ರೂ. 230 ರೂ. 15,325 ರೂ.3 ಆಕ್ಸೆಲ್ ವಾಣಿಜ್ಯ ವಾಹನ 500 ರೂ. 750 ರೂ. 250 ರೂ. 16,715 ರೂ.ಭಾರೀ ನಿರ್ಮಾಣ ಯಂತ್ರ (4-6 ಆಕ್ಸಲ್) 720 ರೂ. 1080 ರೂ. 360 ರೂ. 24,030 ರೂ.ಅತಿಗಾತ್ರದ ವಾಹನ (7ಕ್ಕಿಂತ ಅಧಿಕ ಆಕ್ಸಲ್‌) 880 ರೂ. 1,315 ರೂ. 440 ರೂ. 29,255 ರೂ.ಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments